ಸತೀಶ್ ಜಾರಕಿಹೊಳಿ 
ರಾಜಕೀಯ

ರಾಣಿ ಚನ್ನಮ್ಮ ವಿವಿ ಕೇಸರೀಕರಣದ ವಿರುದ್ಧ ಹೋರಾಟ: ಸತೀಶ್ ಜಾರಕಿಹೊಳಿ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸುತ್ತಿರುವುದರ ವಿರುದ್ಧ ಕಾಂಗ್ರೆಸ್.....

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸುತ್ತಿರುವುದರ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಅವರು ಬುಧವಾರ ಹೇಳಿದ್ದಾರೆ.
ರಾಣಿ ಚನ್ನಮ್ಮ ವಿವಿಯಲ್ಲಿ ನಡೆದ ದಾಂದಲೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಸತೀಶ್ ಜಾರಕಿಹೊಳಿ, ಸಿಂಡಿಕೇಟ್ ಸದಸ್ಯ ರಾಜು ಚಿಕ್ಕನಗೌಡರ ಸೇರಿದಂತೆ ಕೆಲವರು ಎಬಿವಿಪಿ ಸಂಘಟನೆ ಮುಂದಿಟ್ಟುಕೊಂಡು ವಿವಿಯನ್ನು ಕೇಸರೀಕರಣ ಮಾಡುತ್ತಿದ್ದಾರೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ವರದಿಗಾರರಿಗೆ ತಿಳಿಸಿದ್ದಾರೆ.
ಇಷ್ಟು ದಿನ ವಿಶ್ವವಿದ್ಯಾಲಯ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಸುಮ್ಮನಿದ್ದೆ. ಇನ್ನು ಮುಂದೆ ನಾವು ರಾಜಕೀಯ ಮಾಡಬೇಕಾಗುತ್ತದೆ ಎಂದು ಜಾರಕಿಹೊಳಿ ಎಚ್ಚರಿಕೆ ನೀಡಿದರು.
ಇನ್ನು ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರು, ಕೇಸರೀಕರಣವನ್ನು ಭಾರತದಲ್ಲಲ್ಲದೆ ಪಾಕಿಸ್ತಾನದಲ್ಲಿ ಮಾಡಲಾದಿತೆ? ಕೇಸರಿ ನಮ್ಮ ದೇಶದ ಹೆಮ್ಮೆಯ ಸಂಕೇತ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT