ಪ್ರತಿಭಟನೆಯಲ್ಲಿ ಮೊಹಮದ್ ನಲಪಾಡ್ 
ರಾಜಕೀಯ

ಅಮಾನತಾಗಿದ್ದರೂ ಕಮ್ಮಿಯಾಗಿಲ್ಲ ನಲಪಾಡ್ 'ಹವಾ': ಕಾಂಗ್ರೆಸ್ ಪ್ರತಿಭಟನೆಯಲ್ಲಿ ಜ್ಯುನಿಯರ್ ಹ್ಯಾರಿಸ್!

ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಭಾಗವಹಿಸಿದ್ದರು...

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ  ವಿರುದ್ಧ ನಡೆದ ಪ್ರತಿಭಟನೆಯಲ್ಲಿ  ಶಾಸಕ ಹ್ಯಾರಿಸ್ ಪುತ್ರ  ಮೊಹಮದ್ ನಲಪಾಡ್ ಭಾಗವಹಿಸಿದ್ದರು, ವಿದ್ವತ್ ಮೇಲೆ ಹಲ್ಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೊಹಮದ್ ನಲಪಾಡ್ ನನ್ನು ಆರು ವರ್ಷಗಳ ಕಾಲ ಅಮಾನತು ಮಾಡಲಾಗಿದೆ.
ನಿಷೇಧದ ಹೊರತಾಗಿಯೂ ಮೊಹಮದ್ ನಲಪಾಡ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಕೇವಲ ಒಂದು ಬಾರಿಯಲ್ಲ ಹಲವು ಪ್ರತಿಭಟನೆಗಳಲ್ಲಿ ನಲಪಾಡ್ ಭಾಗವಹಿಸುತ್ತಿದ್ದಾರೆ, ಸೆಪ್ಟಂಬರ್ ನಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಶಾಸಕ ಹ್ಯಾರಿಸ್ ಕೈಗೊಂಡ ಪ್ರತಿಭಟನೆಯಲ್ಲಿಯೂ ನಲಪಾಡ್ ಭಾಗವಹಿಸಿದ್ದರು.
ನಾನು ಈ ದೇಶದ ಪ್ರಜೆ, ಹಾಗಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದೆ ಎಂದು ನಲಪಾಡ್ ಸಮರ್ಥಿಸಿಕೊಂಡಿದ್ದಾರೆ, ಮೊಹಮದ್  ತಪ್ಪಿತಸ್ಥ ಎಂದು ಇನ್ನೂ ಸಾಬೀತಾಗಿಲ್ಲ,  ಪ್ರಕರಣ ಇನ್ನೂ ಮುಗಿದಿಲ್ಲ, ಪ್ರತಿಭಟನೆಯಲ್ಲಿ ದೇಶದ ಯಾವ ನಾಗರಿಕ ಬೇಕಾದರೂ ಪಾಲ್ಗೊಳ್ಳೂಬಹುದು ಅದನ್ನು ತಡೆಯುವ ಹಕ್ಕಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ  ಈಶ್ವರ್ ಖಂಡ್ರೆ ಹೇಳಿದ್ದಾರೆ.
ನಲಪಾಡ್ ಪಾಲ್ಗೊಂಡ ಬಗ್ಗೆ ಕಾಂಗ್ರೆಸ್ ಯಾವುದೇ ಸಮರ್ಥನೆ ನೀಡಿದ್ದರೂ ಆರು ವರ್ಷದ ಮುಂಚೆಯೇ ಅಮಾನತು ನಿಷೇಧಿಸಲು ಸಾಧ್ಯವಿಲ್ಲ. ಈ ಸಂಬಂಧ ಹೈಕಮಾಂಡ್  ನಿರ್ಧರಿಸಲಿದೆ ಎಂದು ಖಂಡ್ರೆ ತಿಳಿಸಿದ್ದಾರೆ. 
ಇನ್ನೂ ನಲಪಾಡ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಬಿಜೆಪಿ ಟೀಕಿಸಿದೆ,  ಕಾಂಗ್ರೆಸ್ ಗೂಂಡಾಗಿರಿಯನ್ನು ಪ್ರೋತ್ಸಾಹಿಸುತ್ತಿದೆ  ಮೊಹಮದ್ ನಲಪಾಡ್ ನಂತರ ಸಮಾಜ ವಿರೋಧಿ ಎಲಿಮೆಂಟ್ ಗಳನ್ನು ಬೆಂಬಲಿಸುವುದು ಸರಿಯಲ್ಲ ಎಂದು ಬಿಜೆಪಿ ವಕ್ತಾರ ಪ್ರಕಾಶ್ ಆರೋಪಿಸಿದ್ದಾರೆ. ಇನ್ನೂ ನಲಪಾಡ್ ಭಾಗವಹಿಸಿದ್ದ ಪ್ರತಿಭಟನೆಯ ಚಿತ್ರಗಳು  ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು  ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT