ಬಿಎಸ್'ಪಿ ಪಕ್ಷದ ಸಚಿವ ಎನ್. ಮಹೇಶ್ 
ರಾಜಕೀಯ

ಕಾಂಗ್ರೆಸ್, ಜೆಡಿಎಸ್ ಜಾತಿವಾದಿ ಪಕ್ಷಗಳು: ಬಿಎಸ್'ಪಿ ಸಚಿವ

ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದ ಬಿಎಸ್'ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಬಳಿಕ ಇದೀಗ ಆಡಳಿತಾರೂಢ ಮೈತ್ರಿ ಪಕ್ಷದಲ್ಲಿರುವ ಬಿಎಸ್'ಪಿ ಪಕ್ಷದ ಏಕೈಕ ಸಚಿವ ಜೆಡಿಎಸ್ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ...

ಮೈಸೂರು: ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದ ಬಿಎಸ್'ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಬಳಿಕ ಇದೀಗ ಆಡಳಿತಾರೂಢ ಮೈತ್ರಿ ಪಕ್ಷದಲ್ಲಿರುವ ಬಿಎಸ್'ಪಿ ಪಕ್ಷದ ಏಕೈಕ ಸಚಿವ ಜೆಡಿಎಸ್ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 
ರಾಜ್ಯದಲ್ಲಿರುವ ಮೂರು ಪ್ರಮುಖ ರಾಜಕೀಯ ಪಕ್ಷಗಳು ಜಾತಿವಾದಿ ಪಕ್ಷಗಳಾಗಿವೆ ಎಂದು ಬಿಎಸ್'ಪಿ ಪಕ್ಷದ ಸಚಿವ ಎನ್. ಮಹೇಶ್ ಅವರು ಆರೋಪಿಸಿದ್ದಾರೆ. 
ಜೆಡಿಎಸ್ ಹಾಗೂ ಇತರೆ ಪಕ್ಷಗಳು ಜಾತಿ ಆಧಾರದ ಮೇಲೆ ರಾಜಕೀಯ ಮಾಡುತ್ತಿದ್ದು, ಸಮಾಜವನ್ನು ಒಡೆಯುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಬಿಎಸ್'ಪಿ-ಜೆಡಿಎಸ್ ಮೈತ್ರಿ ಕುರಿತು ಪಕ್ಷದ ಹೈ ಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಮೈತ್ರಿ ಮಾಡಿಕೊಂಡಿತ್ತು. ನಗರ ಸ್ಥಳೀಯ ಚುನಾವಣೆಯಲ್ಲಿ ಏಕಾಂಗಿಯೇ ಸ್ಪರ್ಧೆ ನಡೆಸಿತ್ತು ಎಂದು ಹೇಳಿದ್ದಾರೆ. 
ಬಿಎಸ್'ಪಿ ಕೇವಲ ರಾಜಕೀಯ ಪಕ್ಷವಲ್ಲ. ಜನರನ್ನು ಒಗ್ಗೂಡಿಸಲು ಹೋರಾಡುತ್ತಿರುವ ಪಕ್ಷವಾಗಿದೆ. ಹಿಂದೂಳಿದ ಹಾಗೂ ಅಲ್ಪಸಂಖ್ಯಾತ ಜನರನ್ನು ಉತ್ತಮ ವೇದಿಕೆಗೆ ತರುವ ಗುರಿಯನ್ನು ಹೊಂದಿರುವ ಪಕ್ಷವಾಗಿದೆ. ಸಮಾಜದಲ್ಲಿ ಸಮಾನತೆಯನ್ನು ತರುವಲ್ಲಿ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ವಿಫಲವಾಗಿದೆ. ಬಡವರು ಹಾಗೂ ಸಾಮಾಜಿಕ-ಆರ್ಥಿಕ ಸಮಾನತೆಯನ್ನು ಸಬಲೀಕರಣಗೊಳಿಸುವಲ್ಲಿ ಪಕ್ಷಗಳು ವಿಫಲಗೊಂಡಿವೆ ಎಂದು ತಿಳಿಸಿದ್ದಾರೆ. 
ಮಹೇಶ್ ಅವರ ಈ ಹೇಳಿಕೆಗೆ ಜೆಡಿಎಸ್ ವಕ್ತಾರ ತನ್ವೀರ್ ಅಹ್ಮದ್ ಅವರು ತೀವ್ರವಾಗಿ ಕಿಡಿಕಾರಿದ್ದು, ಜೆಡಿಎಸ್ ಅಥವಾ ಬಿಎಸ್'ಪಿ ಪಕ್ಷಗಳು ಅಸ್ತಿತ್ವಕ್ಕೆ ಬರುವುದಕ್ಕೂ ಮುಂಚಿನಿಂದಲೂ ಜನರು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡುತ್ತಲೇ ಇದ್ದಾರೆ. ಉನ್ನತ ಸ್ಥಾನದಲ್ಲಿರುವವರು ಈ ರೀತಿಯ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದಿದ್ದಾರೆ. 
ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರು ಮಾತನಾಡಿ, ಬಿಎಸ್'ಪಿ ಜೊತೆಗಿನ ಮೈತ್ರಿ ಕುರಿತು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಯಾವತಿಯವರು ನಿರ್ಧಾರ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT