ಮಹಿಳಾ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸೆಲ್ಫಿಗಾಗಿ ಮುಗಿಬಿದ್ದ ಮಹಿಳೆಯರು 
ರಾಜಕೀಯ

ಕೆಲವು ನಾಯಕರ ಅಸೂಯೆಯಿಂದ ಮತ್ತೆ ಮುಖ್ಯಮಂತ್ರಿ ಆಗಲು ಸಾಧ್ಯವಾಗಲಿಲ್ಲ: ಸಿದ್ದರಾಮಯ್ಯ

ಎರಡನೇ ಅವಧಿಗೆ ಮುಖ್ಯಮಂತ್ರಿ ಪಟ್ಟ ಕೈ ತಪ್ಪಿ ಹೋಗಿದ್ದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್-ಜೆ...

ಬೆಂಗಳೂರು: ಎರಡನೇ ಅವಧಿಗೆ ಮುಖ್ಯಮಂತ್ರಿ ಪಟ್ಟ ಕೈ ತಪ್ಪಿ ಹೋಗಿದ್ದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರು ತೀವ್ರ ಅಸಮಾಧಾನ ತಂದಿದೆ ಎಂದು ಅವರ ಮಾತಿನಲ್ಲಿಯೇ ಗೊತ್ತಾಗುತ್ತದೆ. 2018ರಲ್ಲಿ ತಮಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿ ಹೋಗಲು ಕೆಲವು ನಾಯಕರ ಅಸೂಯೆಯೇ ಕಾರಣ, ಇಲ್ಲದಿದ್ದರೆ ಪುನಃ ನಾನು ಸಿಎಂ ಆಗಿ ಆಯ್ಕೆಯಾಗುತ್ತಿದ್ದೆ ಎಂದಿದ್ದಾರೆ.

ಸಿದ್ದರಾಮಯ್ಯನವರು ಹೀಗೆ ಹೇಳಿದ್ದು ಕರ್ನಾಟಕ ಅಹಲ್ಯಾಬಾಯಿ ಹೊಲ್ಕರ್ ಸಂಘ ಮತ್ತು ಪ್ರದೇಶ ಕುರುಬ ಸಂಘ ಆಯೋಜಿಸಿದ್ದ ಮಹಿಳೆಯರ ಅರಿವು ಸಮ್ಮೇಳನದಲ್ಲಿ. ಈ ವೇಳೆ ಮಾತನಾಡಿದ ಅವರು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷನಾಗಿ ತಮ್ಮ ಪಾತ್ರದ ಕುರಿತು ಮಾತನಾಡುತ್ತಾ ತಮ್ಮದೇ ಪಕ್ಷದ ಕೆಲವು ನಾಯಕರಿಗೆ ಪರೋಕ್ಷವಾಗಿ ಮಾತಿನ ಮೂಲಕ ತಿವಿದರು.

ಹೊಟ್ಟೆಕಿಚ್ಚು, ಅಸೂಯೆಗೆ ನಮ್ಮಲ್ಲಿ ಮದ್ದಿಲ್ಲ, ಹಿಂದುಳಿದ ಸಮುದಾಯಗಳ ರಾಜಕೀಯ ನಾಯಕರು ಬೆಳವಣಿಗೆ ಹೊಂದುವುದು, ಮುಂದೆ ಬರುವುದೆಂದರೆ ಕೆಲವರಿಗೆ ಸಹಿಸಿಕೊಳ್ಳಲು ಆಗುವುದಿಲ್ಲ, ಈ ಹೊಟ್ಟೆಕಿಚ್ಚಿನಿಂದಾಗಿ ಕಳೆದ ಚುನಾವಣೆ ನಂತರ ತಮಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಅವಕಾಶ ಇದ್ದರೂ ಕೂಡ ನನಗೆ ನಿರಾಕರಿಸಲಾಯಿತು ಎಂದು ಬಹಿರಂಗವಾಗಿ ಅಸಮಾಧಾನವನ್ನು ಹೊರಹಾಕಿದ್ದಾರೆ.

ತಾವು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಆಕಾಂಕ್ಷೆ ಹೊಂದಿದ್ದೆ ಎಂದು ಕಳೆದ ಆಗಸ್ಟ್ ನಲ್ಲಿ ಹೇಳಿಕೆ ನೀಡುವ ಮೂಲಕ ಸಿದ್ದರಾಮಯ್ಯನವರು ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದ್ದರು. ತಮ್ಮ ಎದುರಾಳಿಗಳ ಕುತಂತ್ರದಿಂದ ಕೈ ತಪ್ಪಿ ಹೋಯಿತು ಎಂದಿದ್ದರು. ನಂತರ ಸ್ವತಃ ಸಿಎಂ ಕುಮಾರಸ್ವಾಮಿಯವರೇ, ಸಿದ್ದರಾಮಯ್ಯನವರು ಜನರ ಆಶೀರ್ವಾದ ಸಿಕ್ಕಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗುವೆ ಎಂದು ಹೇಳಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ಆ ರಾಜಕೀಯ ಬಿರುಗಾಳಿ ಅಲ್ಲಿಗೇ ತಣ್ಣಗಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT