ಕೆ ಸುಧಾಕರ್ 
ರಾಜಕೀಯ

ಲೋಕಸಭೆ ಉಪ ಚನಾವಣೆಯಿಂದ ದೂರವಿರಿ: ದೋಸ್ತಿ ಸರ್ಕಾರಕ್ಕೆ ಶಾಸಕ ಸುಧಾಕರ್ ಮನವಿ

ಲೋಕಸಭೆ ಉಪ ಚುನಾವಣೆಯಿಂದ ದೂರವಿರುವಂತೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್...

ಬೆಂಗಳೂರು: ಲೋಕಸಭೆ ಉಪ ಚುನಾವಣೆಯಿಂದ ದೂರವಿರುವಂತೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಅವರು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಾಲ್ಕರಿಂದ ಐದು ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗ ಉಪ ಚುನಾವಣೆ ಅಗತ್ಯೆ ಇತ್ತೆ? ಎಂದು ಪ್ರಶ್ನಿಸಿರುವ ಸುಧಾಕರ್ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಉಪ ಚುನಾವಣೆಯಿಂದ ದೂರವಿರುವ ಮೂಲಕ ಕೇಂದ್ರ ಚುನಾವಣಾ ಆಯೋಗದ ನಿರ್ಧಾರದ ವಿರುದ್ದ ಪ್ರತಿಭಟಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಚುನಾವಣಾ ಆಯೋಗದ ಈ ನಿರ್ಧಾರದಿಂದ ಖಜಾನೆಯಲ್ಲಿರುವ ಹಣ ಖಾಲಿಯಾಗಲಿದ್ದು, ಇದೊಂದು ಪ್ರಜಾಪ್ರಭುತ್ವದ ಕುಣಿತ ಎಂದು ಕಿಡಿಕಾರಿದ್ದಾರೆ.
ಇತ್ತೀಚಿಗೆ ವಿಧಾನಸಭೆಗೆ ಆಯ್ಕೆಯಾದ ಸಂಸದರ ರಾಜಿನಾಮೆಯಿಂದ ತೆರವಾದ ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪ ಚುನಾವಣೆ ಘೋಷಣೆಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT