ಚಂದ್ರಶೇಖರ್-ಬಿಎಸ್ ಯಡಿಯೂರಪ್ಪ 
ರಾಜಕೀಯ

ಮೈತ್ರಿ ಸರ್ಕಾರದ ವಿರುದ್ಧ ಮುನಿದು ಬಿಜೆಪಿ ಸೇರಿದ ಕಾಂಗ್ರೆಸ್ ಎಂಎಲ್‌ಸಿ ಲಿಂಗಪ್ಪ ಪುತ್ರ ಚಂದ್ರಶೇಖರ್!

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿಗೆ ರಾಮನಗರ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ...

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿಗೆ ರಾಮನಗರ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು ಇದರಿಂದ ಕಾಂಗ್ರೆಸ್ಸಿಗರು ಬೇಸರಗೊಂಡು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 
ವಿಧಾನ ಪರಿಷತ್ ಸದಸ್ಯ, ರಾಮನಗರ ಕಾಂಗ್ರೆಸ್ ಮುಖಂಡ ಸಿಎಂ ಲಿಂಗಪ್ಪ ಪುತ್ರ ಚಂದ್ರಶೇಖರ್ ಪಕ್ಷ ತೊರೆದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 
ಬಿಎಸ್ವೈ ಪಕ್ಷದ ಧ್ವಜ ಹಾಗೂ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಿಪಿ ಯೋಗೇಶ್ವರ್ ಸಹ ಜೊತೆಯಲ್ಲಿದ್ದರು. ಈ ವೇಳೆ ಮಾತನಾಡಿದ ಬಿಎಸ್ವೈ ರಾಮನಗರ ಪಕ್ಷದ ಅಭ್ಯರ್ಥಿ ಎಂದು ಅವರು ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. 2 ದಿನಗಳಲ್ಲಿ ರಾಮನಗರದಲ್ಲಿ ಬೃಹತ್ ಸಮಾರಂಭ ನಡೆಸಿ ಅಭ್ಯರ್ಥಿ ಘೋಷಣೆ ಮಾಡಲಾಗುವುದು ಎಂದರು. 
ಬಿಜೆಪಿ ಸೇರಿದ ಬಳಿಕ ಮಾತನಾಡಿದ ಚಂದ್ರಶೇಖರ್ ಅವರು ನನ್ನ ಆತ್ಮತೃಪ್ತಿಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ನಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ. ನಮ್ಮ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಮಾಡುವುದು ನನ್ನ ಗುರಿಯಾಗಿದೆ. ಬಿಜೆಪಿ ಪಕ್ಷವನ್ನು ಕ್ಷೇತ್ರದಲ್ಲಿ ಬಲಗೊಳಿಸುವತ್ತ ಗಮನ ಹರಿಸುತ್ತೇನೆ ಎಂದರು. 
ಇದಕ್ಕೂ ಮುನ್ನ ಮಾತನಾಡಿದ್ದ ಸಿಎಂ ಲಿಂಗಪ್ಪ ಅವರು ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮಾಡಲ್ಲ. ಹಾಗಂತ ನಾವು ಬಿಜೆಪಿಗೂ ಬೆಂಬಲ ನೀಡಲ್ಲ. ಬಂಡಾಯ ಅಭ್ಯರ್ಥಿ ಕಣಕ್ಕಿಳಿಸಲು ಚಿಂತನೆ ನಡೆಸುತ್ತೇವೆ ಎಂದು ಹೇಳಿದ್ದರು. ಆದರೆ ಈ ಎಲ್ಲದರ ನಡುವೆ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆಯಾಗಿ ಮತ್ತೆ ಟ್ವಿಸ್ಟ್ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT