ಯೋಗೀಶ್ವರ್, ಚಂದ್ರಶೇಖರ್ ಲಿಂಗಪ್ಪ ಮತ್ತು ಯಡಿಯೂರಪ್ಪ 
ರಾಜಕೀಯ

ಸಮ್ಮಿಶ್ರ ಸರ್ಕಾರಕ್ಕೆ ಹಿನ್ನಡೆ: ರಾಮನಗರದಲ್ಲಿ 'ಮಿನಿ ಆಪರೇಷನ್ ಕಮಲ'; 25 ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ

ರಾಮನಗರದ ರಾಜಕೀಯ ವಾತಾವರಣ ಕ್ಷಣಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ವಿಧಾನ ಪರಿಷತ್ ಸದಸ್ಯ, ರಾಮನಗರ ಕಾಂಗ್ರೆಸ್ ಮುಖಂಡ ಸಿಎಂ

ರಾಮನಗರ: ರಾಮನಗರದ ರಾಜಕೀಯ ವಾತಾವರಣ ಕ್ಷಣಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ವಿಧಾನ ಪರಿಷತ್ ಸದಸ್ಯ, ರಾಮನಗರ ಕಾಂಗ್ರೆಸ್ ಮುಖಂಡ ಸಿಎಂ ಲಿಂಗಪ್ಪ ಪುತ್ರ ಚಂದ್ರಶೇಖರ್ 25 ಕಾಂಗ್ರೆಸ್ ಮುಖಂಡರೊಂದಿಗೆ  ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಭಿನ್ನಾಭಿಪ್ರಾಯ ಬಿಜೆಪಿಗೆ ವರವಾಗಿ ಪರಿಣಮಿಸಿದೆ,  ಬಿಜೆಪಿ ಸೇರ್ಪಡೆಯಾದವರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಾಂಗ್ರೆಸ್ ಮುಖಂಡರಾಗಿದ್ದರು. ರಾಮನಗರ ಮಿನಿ ಆಪರೇಷನ್ ಕಮಲಕ್ಕೆ ಸಾಕ್ಷಿಯಾಗಿದೆ.
ರಾಮನಗರದಲ್ಲಿ ಭದ್ರವಾಗಿ ಬೇರೂರಲು ಹವಣಿಸುತ್ತಿರುವ ಬಿಜೆಪಿ ಹಲವು ಅತೃಪ್ತ ಕಾಂಗ್ರೆಸ್ ನಾಯಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. 
ನನ್ನ ಆತ್ಮತೃಪ್ತಿಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ನಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ. ನಮ್ಮ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಮಾಡುವುದು ನನ್ನ ಗುರಿಯಾಗಿದೆ.  ಹಾಗೂ ಜೆಡಿಎಸ್ ಸೋಲಿಸುವುದೇ ನನ್ನ ಪ್ರಮುಖ ಉದ್ದೇಶ.  ನನಗೆ ಯಾವುದೇ ಕರ್ತವ್ಯ ವಹಿಸಿದರು ಶ್ರಮವಹಿಸಿ ಕೆಲಸ ಮಾಡಲು ನಾನು ಸಿದ್ದನಿದ್ದೇನೆ, ಯಾವುದೇ ಷರತ್ತಿಲ್ಲದೇ ನಾನು ಬಿಜೆಪಿ ಸೇರಿದ್ದೇನೆ. ಪಕ್ಷವನ್ನು ಕ್ಷೇತ್ರದಲ್ಲಿ ಬಲಗೊಳಿಸುವತ್ತ ಗಮನ ಹರಿಸುತ್ತೇನೆ ಚಂದ್ರಶೇಖರ್ ಲಿಂಗಪ್ಪ ಹೇಳಿದ್ದಾರೆ.
ರಾಮನಗರ ಪಕ್ಷದ ಅಭ್ಯರ್ಥಿ ಎಂದು ಅವರು ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. 2 ದಿನಗಳಲ್ಲಿ ರಾಮನಗರದಲ್ಲಿ ಬೃಹತ್ ಸಮಾರಂಭ ನಡೆಸಿ ಅಭ್ಯರ್ಥಿ ಘೋಷಣೆ ಮಾಡಲಾಗುವುದು. ಚಂದ್ರಶೇಖರ್ ಅವರು ಬಿಜೆಪಿ ಸೇರಿದ್ದರಿಂದ ರಾಮನಗರದಲ್ಲಿ ನಮಗೆ ದೊಡ್ಡ ಬೆಂಬಲ ಸಿಕ್ಕಿದಂತಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ,
ರಾಮನಗರ ಮತ್ತು ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ಬಿಜೆಪಿ ಪ್ರಬಲ ಪೈಪೋಟಿ ನೀಡಲಿದೆ.  ಚಂದ್ರಶೇಖರ್ ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ಅವರಿಗೆ ರಾಮನಗರದಿಂದ ಟಿಕೆಟ್ ನೀಡಲಿದ್ದು ಅನಿತಾ ಕುಮಾರ ಸ್ವಾಮಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ, 
ಆದರೆ ರಾಮನಗರದಿಂದ ಕಣಕ್ಕಿಳಿಯಲು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್ ಭಾರೀ ಉತ್ಸುಕರಾಗಿದ್ದಾರೆ,
ಇನ್ನೂ ರಾಮನಗರ ಕಾಂಗ್ರೆಸ್  ನಾಯಕ ಇಕ್ಬಾಲ್ ಅವರನ್ನು ಬಿಜೆಪಿಗೆ ಸೇರುವಂತೆ ಓಲೈಸಲು ಕಮಲ ನಾಯಕರು ಮುಂದಾಗಿದ್ದಾರೆ,. ಆದರೆ ಹುಸೇನ್ ರಾಮನಗರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೇ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಥಿಸುವುದಾಗಿ ಬೆದರಿಕೆ ಹಾಕಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT