ರಾಜಕೀಯ

ಸಚಿವ ಮಹೇಶ್ ರಾಜೀನಾಮೆಗು ಬಿಜೆಪಿಗು ಯಾವುದೇ ಸಂಬಂಧವಿಲ್ಲ: ಯಡಿಯೂರಪ್ಪ

Nagaraja AB

ಶಿವಮೊಗ್ಗ : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ರಾಜೀನಾಮೆ ನೀಡಿದ ವಿಚಾರಕ್ಕೂ ಬಿಜೆಪಿಗೂ  ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ವೈಯಕ್ತಿಕವಾದದ್ದು, ಅದಕ್ಕೆ ಮುಖ್ಯ ಕಾರಣ ಏನು ಎಂಬುದು ತಮಗೆ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ಸ್ಥಾನದಲ್ಲಿದ್ದು, ವಿರೋಧ ಪಕ್ಷದ ಕೆಲಸವೇನೋ ಅದನ್ನೇ ಮಾಡುತ್ತೇವೆ. ಆದರೆ, ಒಂದು ವೇಳೆ ಯಾವುದಾದರೂ ಕಾರಣಕ್ಕೆ ಸರ್ಕಾರ ಉರುಳಿದರೆ  ಮುಂದೇನು ಮಾಡಬೇಕು ಎಂಬುದರ ಬಗ್ಗೆ ನೋಡಲಾಗುವುದು ಎಂದರು.

ಇದೇ ವೇಳೆ ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಸಮ್ಮಿಶ್ರ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಶಾಸಕರು ಉಸಿರುಗಟ್ಟಿದ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ವಿಧಾನಸೌಧ ಶಾಸಕರಿಲ್ಲದೆ ಭೂತ ಬಂಗಲೆಯಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

SCROLL FOR NEXT