ನಾಮಪತ್ರ ಸಲ್ಲಿಸಿದ ಬಿ,ವೈ ರಾಘವೇಂದ್ರ 
ರಾಜಕೀಯ

ರಂಗೇರಿದ ಉಪಚುನಾವಣಾ ಕಣ: ಶಿವಮೊಗ್ಗದಲ್ಲಿ ರಾಘವೇಂದ್ರ, ರಾಮನಗರದಿಂದ ಚಂದ್ರಶೇಖರ್ ನಾಮಪತ್ರ ಸಲ್ಲಿಕೆ

ನವೆಂಬರ್ 3 ರಂದು ನಡೆಯುವ ಉಪ ಚುನಾವಣೆಗೆ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ...

ಶಿವಮೊಗ್ಗ/ ರಾಮನಗರ: ನವೆಂಬರ್ 3 ರಂದು ನಡೆಯುವ ಉಪ ಚುನಾವಣೆಗೆ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ  ಇಂದು ನಾಮ ಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮೊದಲು ಬಿಎಸ್​ವೈ ಕುಟುಂಬಸ್ಥರು ಟೆಂಪಲ್​ ರನ್​ ನಡೆಸಿದರು. ಕುಟುಂಬಸ್ಥರು ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಇದಕ್ಕೂ ಮೊದಲು ರಾಘವೇಂದ್ರ ಅವರು ಪತ್ನಿ ಸಹಿತ ಈಶ್ವರನ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸದರು. ನಂತರ ರವೀಂದ್ರ ನಗರದ ಗಣಪತಿ ದೇಗುಲಕ್ಕೆ ಭೇಟಿ ನೀಡಿದರು.
ಅಭ್ಯರ್ಥಿ ರಾಘವೇಂದ್ರ ಅವರೊಂದಿಗೆ  ಕ್ಷೇತ್ರ ಉಸ್ತುವಾರಿ ಕೆ.ಎಸ್.ಈಶ್ವರಪ್ಪ, ಶಾಸಕ ಹರತಾಳು ಹಾಲಪ್ಪ, ಎಂ.ಬಿ.ಭಾನುಪ್ರಕಾಶ್, ರಾಘವೇಂದ್ರ ಪತ್ನಿ ತೇಜಸ್ವಿನಿ ಸೇರಿದಂತೆ ಕುಟುಂಬ ಸದಸ್ಯರು ಇದ್ದರು..
ಇನ್ನೂ ರಾಮನಗರ ವಿಧಾನಸಭೆ ಉಪ ಚುನಾವಣೆಗೆ ಬಿಜೆಪಿಯಿಂದ ಚಂದ್ರಶೇಖರ್ ಲಿಂಗಪ್ಪ ಇಂದು ರಾಮನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. 
ಈ ವೇಳೆ ಮಾಜಿ ಡಿಸಿಎಂ ಆರ್ ಅಶೋಕ, ಮಾಜಿ ಸಚಿವ ಸಿ,ಪಿ ಯೋಗೇಶ್ವರ್ ಸಂಸದ ಪಿ,ಸಿ ಮೋಹನ್ ಮತ್ತಿತರರು ಸಾಥ್ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT