ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿ 
ರಾಜಕೀಯ

ಉಪಚುನಾವಣೆ: ಕಾಂಗ್ರೆಸ್, ಜೆಡಿಎಸ್ ಗೆ ಬಂಡಾಯದ ಭೀತಿ

ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ವಿಚಾರದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಕೆಲವರು ಬಂಡಾಯದ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ.

ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ವಿಚಾರದಿಂದ  ಕಾಂಗ್ರೆಸ್ ಹಾಗೂ ಜೆಡಿಎಸ್  ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಕೆಲವರು ಬಂಡಾಯದ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ.

ಮಂಡ್ಯ ಹಾಗೂ ರಾಮನಗರದಲ್ಲಿ   ಜೆಡಿಎಸ್ ನೊಂದಿಗೆ ಮೈತ್ರಿಗೆ ಕೆಲ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ರವಿಕುಮಾರ್ ಗೌಡ,  ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ರಾಮನಗರದಲ್ಲೂ ಕೂಡಾ ಕಾಂಗ್ರೆಸ್ ನಾಯಕರು ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ  ಮಾಡುವುದಕ್ಕೆ ಇಷ್ಟಪಡುತ್ತಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ನೆರವಾಗಲಿದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

ಅಲ್ಪಸಂಖ್ಯಾತ ಮತಗಳೇ ಹೆಚ್ಚಾಗಿರುವ ರಾಮನಗರದಲ್ಲಿ ಇಕ್ಬಲ್ ಹುಸೇನ್ ಕಾಂಗ್ರೆಸ್ ಪರ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದರು. ಆದರೆ. ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ಅವರು ಅಸಮಾಧಾನಗೊಂಡಿದ್ದಾರೆ. ಅವರನ್ನು ಭೇಟಿ ಮಾಡಿದ ಸಂಸದ ಡಿ. ಕೆ. ಸುರೇಶ್,  ಪಕ್ಷದ ನಿರ್ಧಾರವನ್ನು ಪರಿಗಣಿಸುವಂತೆ ಮನವಿ ಮಾಡಿಕೊಂಡರು.

ಬಿಜೆಪಿಯಲ್ಲೂ ಬಂಡಾಯ ಕಂಡಬರುತ್ತಿದೆ. ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಪುತ್ರ ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡಿರುವುದರಿಂದ ಕೆಲ ನಿಷ್ಠಾವಂತ ಕಮಲ ಕಾರ್ಯಕರ್ತರು ಅತೃಪ್ತಿ ಗೊಂಡಿದ್ದಾರೆ. ಮಂಡ್ಯದಲ್ಲೂ ಸಿದ್ದರಾಮಯ್ಯ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಜಮಖಂಡಿಯಲ್ಲಿ ಸಿದ್ದು ನ್ಯಾಮೇಗೌಡ ಪುತ್ರ ಆನಂದ್ ನ್ಯಾಮೇಗೌಡ ಸ್ಪರ್ಧೆಯಿಂದ ಕೆಲ ಸ್ಥಳೀಯ ನಾಯಕರು ಅಸಮಾಧಾನಗೊಂಡಿದ್ದಾರೆ.  ಸ್ಥಳೀಯ ಕಾಂಗ್ರೆಸ್ ಮುಖಂಡ ಸನತ್ ಕುಮಾರ್ ಬೆಳಗಲಿ ಸ್ವತಂತ್ರವಾಗಿ ಸ್ಪರ್ಧಿಸುವ ಬೆದರಿಕೆ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT