ಸಚಿವ ಡಿ.ಕೆ.ಶಿವಕುಮಾರ್ 
ರಾಜಕೀಯ

'ಶೋ' ಮಾಡೋದು ಬಿಟ್ಟು ಕೆಲಸ ಮಾಡಿ: ಸಚಿವ ಡಿಕೆಶಿಗೆ ರಮೇಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ ರಮೇಶ್ ಜಾರಕಿಹೊಳಿಯವರು ಇದೀಗ ಮತ್ತೆ ಡಿಕೆಶಿ ವಿರುದ್ಧ ಹರಿಹಾಯ್ದಿದ್ದಾರೆ...

ಬಳ್ಳಾರಿ: ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ ರಮೇಶ್ ಜಾರಕಿಹೊಳಿಯವರು ಇದೀಗ ಮತ್ತೆ ಡಿಕೆಶಿ ವಿರುದ್ಧ ಹರಿಹಾಯ್ದಿದ್ದಾರೆ. 
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಿ.ಕೆ.ಶಿವಕುಮಾರ್ ಅವರು ಶೋ ಮಾಡೋದು ಬಿಟ್ಟು ಕೆಲಸ ಮಾಡಿದರೆ ಒಳಿತ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. 
ಲಿಂಗಾಯತ ಧರ್ಮಕದ ಕುರಿತು ಡಿ.ಕೆ.ಶಿವಕುಮಾರ್ ಅವರು ನೀಡಿರುವುದು ಅವರ ವೈಯಕ್ತಿಕ ಹೇಳಿಕೆ. ಆದರೆ, ಈ ಬಗ್ಗೆ ಆಕ್ಷೇಪ ಇದ್ದಿದ್ದರೆ, ಸಚಿವ ಸಂಪುಟ ಸಭೆಯಲ್ಲಿಯೇ ಚರ್ಚೆ ಮಾಡಬಹುದಿತ್ತಲ್ಲವೇ? ಯಾಕೆ ಮೌನ ವಹಿಸಿದ್ದರು? ಇದೀಗ ಬಹಿರಂಗ ಹೇಳಿಕೆ ನೀಡುವ ಉದ್ದೇಶವೇನು? ಅವರ ಹಿಂಬಾಲಕರಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡುವಾಗ ಶಿವಕುಮಾರ್ ಎಲ್ಲಿಗೆ ಹೋಗಿದ್ದರು? ಪ್ರತಿ ಸಭೆಯಲ್ಲಿ ಮಾತನಾಡಿದರೂ ಏಕೆ ತಡೆಯಲಿಲ್ಲ ಎಂದು ಪ್ರಶ್ನಿಸಿದ್ದಾರೆ. 
ಅಲ್ಲದೆ ಲಿಂಗಾಯತ ಧರ್ಮದ ವಿಚಾರ ಕುರಿತು ಸಂಪುಟ ಸಭೆಗಳಲ್ಲಿ ಅಂದು ಸಚಿವರಾಗಿದ್ದ ಈಶ್ವರ ಖಂಡ್ರೆ ಮತ್ತು ಎಸ್.ಎಸ್.ಮಲ್ಲಿಕಾರ್ಜುನ ಅವರು ಮಾತ್ರ ಪರ ವಿರೋಧವಾಗಿ ಚರ್ಚಿಸಿದರೆ ವಿನಃ ಇವರೇಕೆ ಮೌನವಾಗಿದ್ದರು? ಎಂದು ಕೇಳಿದ್ದಾರೆ. 
ಪ್ರತ್ಯೇಕ ಧರ್ಮದ ಹೇಳಿಕೆಯನ್ನು ನಾವು ಪರಿಗಣಿಸಿದ್ದೇವೆ ಅಷ್ಟೇ. ಈ ವಿಚಾರದಲ್ಲಿ ಎಂ.ಬಿ. ಪಾಟೀಲ್ ಅವರಿಗೆ ನಮ್ಮ ಬೆಂಬಲವಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT