ಸಂಗ್ರಹ ಚಿತ್ರ 
ರಾಜಕೀಯ

ಹಾಸನದಲ್ಲಿ ಜೆಡಿಎಸ್'ಗೆ ಬೆಂಬಲ ನೀಡುವುದಿಲ್ಲ: ಕಾಂಗ್ರೆಸ್ ನಾಯಕ ಎ.ಮಂಜು

ಲೋಕಸಭಾ ಚುನಾವಣೆ ವೇಳೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್'ಗೆ ಬೆಂಬಲ ನೀಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಎ ಮಂಜು ಅವರು ಸೋಮವಾರ ಹೇಳಿದ್ದಾರೆ...

ಹಾಸನ: ಲೋಕಸಭಾ ಚುನಾವಣೆ ವೇಳೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್'ಗೆ ಬೆಂಬಲ ನೀಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಎ ಮಂಜು ಅವರು ಸೋಮವಾರ ಹೇಳಿದ್ದಾರೆ. 
ಅರಕಲಗೂಡಿನ ಹನ್ಯಾಳು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಗುರಿ ಮಾಡುತ್ತಿರುವ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೈ ಕಮಾಂಡ್ ಮೈತ್ರಿ ಮಾಡಿಕೊಂಡಿದ್ದು, ಇದು ಕಾರ್ಯಕರ್ತರ ಆಸೆಗಳಿಗೆ ವಿರುದ್ಧವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ನಮ್ಮ ಬೆಂಬಲವಿಲ್ಲ. 
ದೇವೇಗೌಡ ಅಥವಾ ಹಾಸನದಲ್ಲಿ ಕಣಕ್ಕಿಳಿಯುವ ಯಾವುದೇ ಜೆಡಿಎಸ್ ಅಭ್ಯರ್ಥಿಗೆ ನಾನು ಬೆಂಬಲ ನೀಡಿದರೆ, ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನನ್ನನ್ನು ದೂಷಿಸುತ್ತಾರೆ. ದೇವೇಗೌಡ ಹಾಗೂ ಅವರ ಕುಟುಂಬವನ್ನು ಭವಿಷ್ಯದಲ್ಲಿಯೂ ವಿರೋಧಿಸುತ್ತೇನೆ. ಹೊಂದಾಣಿಕೆ ರಾಜಕೀಯ ನನಗೆ ಗೊತ್ತಿಲ್ಲ. ಜೆಡಿಎಸ್'ಗೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಹಿತಾಸಕ್ತಿಗಳನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ದೇವೇಗೌಡ ಹಾಗೂ ಅವರ ಕುಟುಂಬಕ್ಕೆ ನಾನು ಬೆಂಬಲ ನೀಡುವುದಿಲ್ಲ. 
ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸುತ್ತೇನೆ. ಹಿರಿಯ ಕಾಂಗ್ರೆಸ್ ನಾಯಕರ ನಿರ್ಧಾರಕ್ಕಾಗಿ ಕಾಯುತ್ತೇನೆಂದು ತಿಳಿಸಿದ್ದಾರೆ. 
ಮಂಜು ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ಅವರು, ರಾಜ್ಯದ ಹಿತಾಸಕ್ತಿಗನುಗುಣುವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನೀತಿಗಳನ್ನು ಅನುಸರಿಸುತ್ತಿದೆ. ಮೈತ್ರಿ ಸರ್ಕಾರದ ಅಭ್ಯರ್ಥಿಗೆ ಬೆಂಬಲ ನೀಡುವುದು, ಬಿಡುವುದು ಮಂಜು ಅವರಿಗೆ ಬಿಟ್ಟಿದ್ದು ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT