ಸಂಗ್ರಹ ಚಿತ್ರ 
ರಾಜಕೀಯ

ದೋಸ್ತಿ ಸರ್ಕಾರಕ್ಕೆ ಶಾಕ್ ನೀಡಲು ರಣತಂತ್ರ: ಹಾಸನದಲ್ಲಿ ಕ್ರಿಕೆಟಿಗ ಶ್ರೀನಾಥ್'ಗೆ ಬಿಜೆಪಿ ಟಿಕೆಟ್?

ರಾಜ್ಯದ ಆಡಳಿತಾರೂಢ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಲು ಬಿಜೆಪಿ ರಣತಂತ್ರವನ್ನೇ ರೂಪಿಸಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅಥವಾ ಕ್ಯಾಪ್ಟನ್ ಗೋಪಿನಾಥ್ ಅವರನ್ನು...

ಹಾಸನ: ರಾಜ್ಯದ ಆಡಳಿತಾರೂಢ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಲು ಬಿಜೆಪಿ ರಣತಂತ್ರವನ್ನೇ ರೂಪಿಸಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅಥವಾ ಕ್ಯಾಪ್ಟನ್ ಗೋಪಿನಾಥ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಹಾಸನ ಕ್ಷೇತ್ರದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಬದಲು ಪ್ರಜ್ವಲ್ ಸ್ಪರ್ಧಿಸಿದ್ದೇ ಆದರೆ, ಹಾಸನ ಜಿಲ್ಲೆಯವರೇ ಆಗಿರುವ ಶ್ರೀನಾಥ್ ಅಥವಾ ಗೋಪಿನಾಥ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚರ್ಚೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 
ಈ ಮೂಲಕ ಹಾಸನದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಕಾರ್ಯಕರ್ತರಲ್ಲಿರುವ ಅಸಮಾಧಾನದ ಲಾಭವನ್ನು ಪಡೆಯಲು ಬಿಜೆಪಿ ತಂತ್ರ ರೂಪಿಸಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. 
ಮೈತ್ರಿ ಸರ್ಕಾರದ ಮೇಲೆ ಅಸಮಾಧಾನ ಇರುವ ನಾಯಕರನ್ನು ಬಿಜೆಪಿಗೆ ಸೆಳೆದು ಮೈತ್ರಿ ಪಕ್ಷಗಳನ್ನು ದುರ್ಬಲಗೊಳಿಸಲು ಬಿಜೆಪಿ ತಂತ್ರ ರೂಪಿಸಿದ್ದರು, ಇದರಂತೆ ಕಾಂಗ್ರೆಸ್ಸಿನ ಮಾಜಿ ಸಚಿವರಾದ ಎ.ಮಂಜು ಅಥವಾ ಬಿ.ಶಿವರಾಂ ಅವರನ್ನು ಪಕ್ಷಕ್ಕೆ ಸೆಳೆಯಲು ಚಿಂತನೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. 
ಇಷ್ಟೇ ಅಲ್ಲದೆ, ಜೆಡಿಎಸ್ ವರಿಷ್ಠರ ತವರಿನಲ್ಲೇ ಮೈತ್ರಿ ಪಕ್ಷಕ್ಕೆ ಬಿಗ್ ಶಾಕ್ ನೀಡಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮತ್ತೊಂದು ಮಾಸ್ಟರ್ ಪ್ಲಾನ್ ರೂಪಿಸಿದ್ದು, ಕಾಂಗ್ರೆಸ್ ನಾಯಕರು ಬಿಜೆಪಿಗೆ ಪಕ್ಷಕ್ಕೆ ಬಾರದೇ ಹೋದರೆ, ಸೆಲೆಬ್ರಿಟಿಗಳನ್ನ ಕಣಕ್ಕಿಳಿಸಿ ಟಫ್ ಫೈಟ್ ನೀಡಲು ಚರ್ಚೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT