ಜನಾರ್ದನ ಪೂಜಾರಿ 
ರಾಜಕೀಯ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಸ್ಪರ್ಧೆಯಿಂದ ಜನಾರ್ಧನ ಪೂಜಾರಿ ಔಟ್; ಕಾಂಗ್ರೆಸ್ ನಿಂದ ಮುಸ್ಲಿಂ ಅಭ್ಯರ್ಥಿ ಕಣಕ್ಕೆ?

ತಮ್ಮ ವಯಸ್ಸಿನ ಕಾರಣದಿಂದಾಗಿ ಮುಂಬರುವ ಲೋಕಸಭೆ ಚುನಾವಣೆಯಿಂದ ಸ್ಪರ್ದಿಸದಿರಲು ಕಾಂಗ್ರೆಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ..

ಮಂಗಳೂರು: ತಮ್ಮ ವಯಸ್ಸಿನ ಕಾರಣದಿಂದಾಗಿ ಮುಂಬರುವ ಲೋಕಸಭೆ ಚುನಾವಣೆಯಿಂದ ಸ್ಪರ್ದಿಸದಿರಲು ಕಾಂಗ್ರೆಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ನಿರ್ಧರಿಸಿದ್ದಾರೆ. ಹೀಗಾಗಿ ದಕ್ಷಿಣಕನ್ನಡ ಲೋಕಸಭೆ ಕ್ಷೇತ್ರದಿಂದ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಯಸುವ ಬಗ್ಗೆ ಚಿಂತನೆ ನಡೆಸುತ್ತಿದೆ.
ಈ ಬೆಳವಣಿಗೆ ಪಕ್ಷಕ್ಕೆ ದೊಡ್ಡ ಅಚ್ಚರಿ ಉಂಟು ಮಾಡಿದೆ,  ಈಗಾಗಾಲೇ ಹಲವು ನಾಯಕರು ಟಿಕೆಟ್ ರೇಸ್ ನಲ್ಲಿರುವು ಮುಂದಿನ ಚುನಾವಣೆಯಲ್ಲಿ ಪಕ್ಷದ ಮೇಲೆ ಪರಿಣಾಮ ಬಿರುವ ಸಾದ್ಯತೆಗಳಿವೆ. 
ಬುಧವಾರ ಮಂಗಳೂರಿನಲ್ಲಿ ಈ ಸಂಬಂಧ ಸಭೆ ನಡೆಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಕೇಂದ್ರ ಸಮಿತಿ ಅಧ್ಯಕ್ಷ ಮೊಹಮದ್ ಭಾಗವಹಿಸಿದ್ದರು. ಮುಸ್ಲಿಂ ಸಮುದಾಯದ ಹಲವರು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸುವಂತೆ ಒತ್ತಾಯಿಸಿದ್ದಾರೆ, 
ನವೆಂಬರ್ 30 ರೊಳಗೆ ಪಕ್ಷದ ಅಭ್ಯರ್ಥಿ  ಹೆಸರು ಪ್ರಟಿಸುವಂತೆ ಡೆಡ್ ಲೈನ್ ನೀಡಲಾಗಿದೆ,ಒಂದು ವೇಳೆ ಪ್ರಕಟಿಸದಿದ್ದರೇ ಡಿಸೆಂಬರ್ 15 ರಂದು  ನೆಹರು ಮೈದಾನದಲ್ಲಿ ಸಭೆ ನಡೆಸಿ ಸೂಕ್ತ  ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ, 
 ಹಿರಿಯ ನಾಯಕರಾದ ಬಿ.ಕೆ ಹರಿಪ್ರಸಾದ್, ರಮಾನಾಥ್ ರೈ ಕೂಡ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ, ಆದರೆ ಈ ಸಂಬಂಧ ಪ್ರತಿಕ್ರಿಯಿಸಲು  ರಮಾನಾಥ ರೈ ನಿರಾಕರಿಸಿದ್ದಾರೆ, 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT