ರಾಜಕೀಯ

ಮೋದಿ ಜನಪ್ರಿಯತೆ ಕ್ಷೀಣಿಸುತ್ತಿದೆ,ದೇಶದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ: ಎಚ್.ಡಿ ಕೆ

Shilpa D
ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನೇ ದಿನೇ ಕ್ಷೀಣಿಸುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸದ್ಯ ನಡೆಯುತ್ತಿರುವ ಉಪ ಚುನಾವಣೆ, ದೇಶದ ಜನತೆಗೆ ಹೊಸ ಸಂದೇಶವನ್ನು ನೀಡುತ್ತದೆ ಎಂದು ಹೇಳಿದ್ದಾರೆ.
ಶಿವಮೊಗ್ಗದ ಶಿಕಾರಿಪುರ ತಾಲೂಕಿನ  ಶಿರಾಳಿಕೊಪ್ಪದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಮೋದಿ ಸರ್ಕಾರ ದೇಶದ ಜನತೆಯ  ದಾರಿ ತಪ್ಪಿಸುತ್ತಿದೆ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ಅಬ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಬೇಕೆಂದು ಕುಮಾರ ಸ್ವಾಮಿ ಮನವಿ ಮಾಡಿದ್ದಾರೆ, ಒಂದು ವೇಳೆ ಮಧು  ಬಂಗಾರಪ್ಪ ಅವರನ್ನು ಗೆಲ್ಲಿಸಿದರೇ  ದೇಶದ ಜನತೆಗೆ ಪ್ರಬಲ ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದ್ದಾರೆ.
SCROLL FOR NEXT