ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ) 
ರಾಜಕೀಯ

ಮಿಟೂ ಆರೋಪ ಬಂದರೆ ಅದನ್ನು ಎದುರಿಸುವ ಶಕ್ತಿ ಇದೆ: ಹೆಚ್ ಡಿ ಕುಮಾರಸ್ವಾಮಿ

ಶಾಸಕ ಕುಮಾರ್ ಬಂಗಾರಪ್ಪನವರ ಕೀಳು ಮಟ್ಟದ ಹೇಳಿಕೆಗೆ ಏಕೆ ಪ್ರತಿಕ್ರಿಯೆ ನೀಡಲಿ ಎಂದು ಸಿಎಂ ...

ಬೆಂಗಳೂರು: ಶಾಸಕ ಕುಮಾರ್ ಬಂಗಾರಪ್ಪನವರ ಕೀಳು ಮಟ್ಟದ ಹೇಳಿಕೆಗೆ ಏಕೆ ಪ್ರತಿಕ್ರಿಯೆ ನೀಡಲಿ ಎಂದು ಸಿಎಂ ಕುಮಾರಸ್ವಾಮಿ ಕೇಳಿದ್ದಾರೆ.

ನಿನ್ನೆ ಶಿವಮೊಗ್ಗದಲ್ಲಿ ಶಾಸಕ ಕುಮಾರ ಬಂಗಾರಪ್ಪ, ಮುಖ್ಯಮಂತ್ರಿಗಳೇ ನಿಮ್ಮ ಮೇಲೂ ಮಿಟೂ ಆರೋಪ ಕೇಳಿಬರಬಹುದು, ಎಚ್ಚರವಾಗಿರಿ, ರಾಧಿಕಾ ಕುಮಾರಸ್ವಾಮಿಯವರನ್ನು ನೀವು ಸಾರ್ವಜನಿಕವಾಗಿ ಪತ್ನಿ ಎಂದು ಏಕೆ ಒಪ್ಪಿಕೊಳ್ಳುತ್ತಿಲ್ಲ ಎಂದು ವೈಯಕ್ತಿಕವಾಗಿ ಟೀಕಿಸಿದ್ದರು.

ಈ ಬಗ್ಗೆ ಬೆಂಗಳೂರಿನಲ್ಲಿ ಸಿಎಂ ಬಳಿ ಪತ್ರಕರ್ತರು ಪ್ರಶ್ನೆ ಕೇಳಿದಾಗ, ಯಾಕ್ರೀ ಅದೆಲ್ಲ, ಯಾರ್ರೀ ಅದು, ಚುನಾವಣೆ ಟೈಮಲ್ಲಿ ಪರ್ಸನಲ್ ವಿಷಯ ಎಲ್ಲ ಯಾಕೆ, ಚುನಾವಣೆ ಬಗ್ಗೆ ಕೇಳಿ, ಮಾತನಾಡುತ್ತೇನೆ, ಯಾರೋ ಕೇಳಿದ್ದನ್ನು, ತೀರಾ ಖಾಸಗಿ ವಿಷಯಗಳನ್ನು ಚರ್ಚೆ ಮಾಡಲ್ಲ ಎಂದು ಗರಂ ಆಗಿಯೇ ಉತ್ತರ ಕೊಟ್ಟರು.

ಸುದ್ದಿಗಾರರು ಮತ್ತೆ ಕುಮಾರಸ್ವಾಮಿಯವರನ್ನು ಕೆಣಕಿದಾಗ, ನೋಡಿ, ನೀವು ಏನಾದ್ರು ಚುನಾವಣೆ ಬಗ್ಗೆ ರಾಜಕೀಯವಾಗಿ ಚರ್ಚೆ ಮಾಡಿ ಅಂದ್ರೆ ಚರ್ಚೆ ಮಾಡ್ತೇನೆ. ಚುನಾವಣೆ ವಿಷಯದಲ್ಲಿ ಬೇರೆ ಖಾಸಗಿ ವಿಷಯ ಮಾತನಾಡುವುದು ಅವರ ಕೀಳು ಮಟ್ಟದ ಅಭಿರುಚಿಯನ್ನು ತೋರಿಸುತ್ತದೆ, ಅದಕ್ಕೆ ನಾನು ಏಕೆ ಉತ್ತರ ಕೊಡಲಿ ಎಂದರು.

ಮಿಟೂ ಆರೋಪ ಬಂದರೆ ಏನು ಮಾಡ್ತೀರಿ ಎಂದು ಮತ್ತೆ ಸುದ್ದಿಗಾರರು ಕೇಳಿದರು. ಆಗ ಸಿಎಂ ಅಂತಹ ಆರೋಪಗಳನ್ನು ಬಂದರೆ ಅದನ್ನು ಎದುರಿಸುವ ಶಕ್ತಿ ಇದೆ, ನಾನು ಯಾವುದೇ ತಪ್ಪುಗಳು ಮಾಡದಿರುವುದರಿಂದ ಅದನ್ನು ಎದುರಿಸುವಂತಹ ಶಕ್ತಿ ಇದೆ, ಬೇರೆ ಏನಾದರೂ ವಿಷಯಗಳಿದ್ದರೆ ಚರ್ಚೆ ಮಾಡಿ ಎಂದು ವಿಷಯವನ್ನು ಕೊನೆಗೊಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT