ವಿಜಯಪುರ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಅಯೋಗ್ಯ, ನಕಲಿ ಬ್ರಾಹ್ಮಣ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ವಿಧಾನ ಪರಿಷತ್ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಯತ್ನಾಳ್, ರಾಹುಲ್ ಗಾಂಧಿ ಕರೆಯದಿದ್ದರೂ ವಿದೇಶಗಳಿಗೆ ಭೇಟಿ ನೀಡುತ್ತಿದ್ದು, ಚೀನಾ ಹಾಗೂ ಪಾಕಿಸ್ತಾನ ಮಧ್ಯವರ್ತಿಯಾಗಿದ್ದಾರೆ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ತಾವು ಜನಿವಾರ ಬ್ರಾಹ್ಮಣರು ಅಂತಾ ಹೇಳಿಕೊಳ್ಳುತ್ತಾರೆ. ಆದರೆ ಈಗ ಅವರಿಗೆ ದೇವರ ನೆನಪಾಗಿದೆ. ಇಂತಹ ಅಯೋಗ್ಯ ಈ ದೇಶದ ಪ್ರಧಾನಿಯಾದರೆ ಅದೊಂದು ದುರಂತ ಎಂದರು.
ಭಾರತದ ಸೈನಿಕರನ್ನು ಪಾಕಿಸ್ತಾನಿಯರು ಹತ್ಯೆ ಮಾಡುತ್ತಿದ್ದಾರೆ. ಇದನ್ನು ಮರೆತು ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗಿ ಬಂದರು. ಅಷ್ಟೇ ಅಲ್ಲದೆ ಕಾಂಗ್ರೆಸ್ ನವರು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಕೊಡಲು ಮುಂದಾಗುತ್ತಿದ್ದಾರೆ ಎಂದು ಯತ್ನಾಳ್ ದೂರಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos