ಸಿದ್ದರಾಮಯ್ಯ 
ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಗೆ ಸಹಾಯವಾಗಲಿಲ್ಲ ಮಾಜಿ ಸಿಎಂ ಸಿದ್ದರಾಮಯ್ಯ ವರ್ಚಸ್ಸು!

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಭಾರೀ ...

ಮೈಸೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆಯಾಗಿದೆ. ಮೈಸೂರು ನಗರ ಕಾರ್ಪೋರೇಷನ್ ಚುನಾವಣೆಯಲ್ಲಿ ಬಹುಮತ ಸಾಬೀತು ಪಡಿಸಲು  ವಿಫಲವಾಗಿದೆ.
ಕೇವಲ ಮ್ಯಾಜಿಕ್ ನಂಬರ್ ಪಡೆಯುವಲ್ಲಿ ಮಾತ್ರ  ಕಾಂಗ್ರೆಸ್ ವಿಫಲವಾಗಿಲ್ಲ, ಬಿಜೆಪಿ ಏಕೈಕ ಪ್ರಬಲ ವಿರೋಧ ಪಕ್ಷವಾಗಿ ಹೊರಬರಲು ಸಹಾಯವಾಗಿದೆ,. 65 ಸೀಟುಗಳಲ್ಲಿ  ಬಿಜೆಪಿ 22 ಪಡೆದಿದೆ ಕಾಂಗ್ರೆಸ್ 19 ಮತ್ತು ಜೆಡಿಎಸ್ 18 ಬಿಎಸ್ ಪಿ 1 ಹಾಗೂ 5 ಸ್ವತಂತ್ರ್ಯ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.
ಕಾರ್ಪೋರೇಷನ್ ಸಿದ್ದರಾಮಯ್ಯ ಪ್ರತಿಷ್ಠೆಯ ವಿಷಯವಾಗಿತ್ತು, ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ  ಸೋಲನುಭವಿಸಿದ ಸಿದ್ದರಾಮಯ್ಯಗೆ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಪ್ರತಿಷ್ಠೆಯಾಗಿತ್ತು. ಪಕ್ಷದ ಮುಖಂಡರಿಗೆ ಆ ಮೂಲಕ ಸಮರ್ಥ ಸಂದೇಶ ನೀಡುವುದು ಬೇಕಾಗಿತ್ತು. ಜೊತೆಗೆ ತನ್ನ ಸಾಂಪ್ರಾದಾಯಿಕ ವಿರೋಧಿ ಜೆಡಿಎಸ್ ಗೂ ಕೂಡ ತಮ್ಮ ತೋಳ್ಬಲ ತೋರಿಸುವಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಸೋಲಿನಿಂದ ಇನ್ನು ಹೊರಬಾರದ ಸಿದ್ದರಾಮಯ್ಯಗೆ ಮತ್ತೊಂದು ಹಿನ್ನಡೆಯಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಶಾಸಕರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿತ್ತು, ಜೊತೆಗೆ ವಯಕ್ತಿಕವಾಗಿ ಸಿದ್ದರಾಮಯ್ಯ ಹಲವು ಸಭೆಗಳಲ್ಲಿ ಪಾಲ್ಗೊಂಡು ಖುದ್ದು ಹಾಜರಾಗಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಮಾಡಿದ ತಪ್ಪು ಮತ್ತೆ ಇಲ್ಲಿ ಮರು ಕಳಿಸದಂತೆ ನೋಡಿಕೊಳ್ಳಲು ಸಿದ್ಧರಾಗಿದ್ದರು, ಆದರೆ ಸ್ಥಳೀಯ ಸಮಸ್ಯೆ, ಜಾತಿ ಮುಂತಾದ ಹಲವು ಕಾರಣಗಳಿಂದಾಗಿ ಸಿದ್ದರಾಮಯ್ಯ ಅಹಿಂದ ಕಾರ್ಡ್ ಪ್ಲೇ ಮಾಡಲು ವಿಫಲರಾಗಿದ್ದಾರೆ,
ಕೃಷ್ಣ ರಾಜ ಕ್ಷೇತ್ರದ 20 ರಲ್ಲಿ 11 ಸೀಟುಗಳನ್ನು ಬಿಜೆಪಿ ಗೆದ್ದಿದೆ, ನರಸಿಂಹ ರಾಜ ಕ್ಷೇತ್ರದಲ್ಲಿ 23 ರಲ್ಲಿ 13 ಕಾಂಗ್ರೆಸ್ ಪಾಲಾಗಿದೆ. 
ಸ್ಥಳೀಯ ಸಂಸ್ಥೆ ಚುನಾವಣೆ ಸೋಲು ಸಿದ್ದರಾಮಯ್ಯ ವರ್ಚಸ್ಸಿಗೆ ಅತಿ ದೊಡ್ಡ ಹೊಡೆತ ನೀಡಿದೆ. ಅತಂತ್ರ ಜನಾದೇಶದಿಂದಾಗಿ ಮೈಸೂರಿನಲ್ಲಿ ಮತ್ತೆ ಕಾಂಗ್ರೆಸ್ ಜೆಡಿಎಸ್ ಜೊತೆ ದೋಸ್ತಿ ಬಯಸುವಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT