ಬಾಗಲಕೋಟೆ: ಚುನಾವಣೆ ವೇಳೆ ಕೈ-ಕಮಲ ಮಾರಾಮಾರಿ, ಮಾಜಿ ಶಾಸಕ ಕಾಶಪ್ಪನವರ್ ಕಾರು ಜಖಂ 
ರಾಜಕೀಯ

ಬಾಗಲಕೋಟೆ: ಚುನಾವಣೆ ವೇಳೆ ಕೈ-ಕಮಲ ಮಾರಾಮಾರಿ, ಮಾಜಿ ಶಾಸಕ ಕಾಶಪ್ಪನವರ್ ಕಾರು ಜಖಂ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಪಿಕೆಪಿಎಸ್) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿದ್ದ ಚುನಾವಣೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದ್ದು ....

ಬಾಗಲಕೋಟೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಪಿಕೆಪಿಎಸ್) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿದ್ದ ಚುನಾವಣೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದ್ದು ಮಾಜಿ ಶಾಸಕ  ವಿಜಯಾನಂದ ಕಾಶಪ್ಪನವರ್‌ ಅವರ ಕಾರು ಜಖಂ ಆಗಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದದಲ್ಲಿ ನಡೆದಿದೆ.
ಘಟನೆ ವೇಳೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು ಕಾರುಗಳು ಹಾಗೂ ಪಿಕೆಪಿಎಸ್ ಕಟ್ಟಡಕ್ಕೆ ಹಾನಿಯಾಗಿದೆ. ಅಲ್ಲದೆ ಘಟನೆಯಲ್ಲಿ ಮಾಜಿ ಕಾಂಗ್ರೆಸ್‌ ಶಾಸಕ ವಿಜಯಾನಂದ ಕಾಶಪ್ಪನವರ್‌ ಸೇರಿದಂತೆ ನಾಲ್ವರಿಗೆ ಗಾಯಗಳಾಗಿದೆ.
ಉದ್ರಿಕ್ತರಿಂದ ನಡೆದ ಕಲ್ಲು ತೂರಾಟದಲ್ಲಿ ಮಾಜಿ ಶಾಸಕ ಕಾಶಪ್ಪನವರ್‌ ಹಾಗು ಇಳಕಲ್ ಸರ್ಕಲ್ ಇನ್ಸ್ ಪೆಕ್ಟರ್ ಅವರುಗಳ ಕಾರು ಹಾನಿಗೊಂಡಿದೆ.
ಚುನಾವಣೆ ಸಮಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ಹೊಡೆದಾಟಗಳು ನಡೆದಿದೆ.ಉದ್ರಿಕ್ತರನ್ನು ಚದುರಿಸಲು ಪೋಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಘಟನೆ ಹಿನ್ನೆಲೆ
ಹುನಗುಂದದ ಪಿಕೆಪಿಎಎಸ್ ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವನೆ ಇದಾಗಿದ್ದು ಅಧ್ಯ್ಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರವಿ ಹುಚನೂರ, ಬಿಜೆಪಿ  ಬೆಂಬಲಿತ ಮುಕ್ಕಣ್ಣ ಮುಕ್ಕಣ್ಣವರ ಸ್ಪರ್ಧಿಸಿದ್ದರು. ಆದರೆ ಕಾಂಗ್ರೆಸ್​ ಬೆಂಬಲಿತ ವ್ಯಕ್ತಿಯ ಅವಿರೋಧ ಆಯ್ಕಗಾಗಿ ಪ್ರಯತ್ನ ಸಾಗಿತ್ತು.ಅಲ್ಲದೆ ಬಿಜೆಪಿ ಪಾಳಯದಲ್ಲಿದ್ದ ಓರ್ವ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷ ತನ್ನತ್ತ ಸೆಳೆದುಕೊಂಡಿತ್ತೆಂದೂ ಹೇಳಲಾಗಿದೆ.
ಗುರುವಾರ ಬೆಳಿಗ್ಗೆ ಕಾಂಗ್ರೆಸ್ ಬೆಂಬಲಿತರೊಡನೆ ಮಾಜಿ ಶಾಸಕ ಕಾಶಪ್ಪನವರ್‌ ಆಗಮನವಾಗುತ್ತಲೇ ಮಾತಿನ ಚಕಮಕಿ ಪ್ರಾರಂಭವಾಗಿ ಕಡೆಗೆ ಅದುವೇ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. 
ಘಟನೆ ವೇಳೆ ಹಾಲಿ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT