ಜಿ.ಪರಮೇಶ್ವರ್ 
ರಾಜಕೀಯ

ಸಿದ್ದರಾಮಯ್ಯ ಯೂರೋಪ್ ಪ್ರವಾಸ ಕೈಗೊಂಡಿರುವ ವೇಳೆ ಕಾಂಗ್ರೆಸ್ ಶಾಸಕರಿಗೆ ಪರಮೇಶ್ವರ್ ಉಪಹಾರ ಕೂಟ!

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಸಚಿವರಿಗೆ ...

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿದ್ದಾರೆ. 
ಏಪ್ರಿಲ್ 7 ರಂದು ಆಯೋಜಿಸಿರುವ  ಉಪಹಾರ ಕೂಟಕ್ಕೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ  ಕೂಡ ಭಾಗವಹಿಸುವ ಸಾದ್ಯತೆ ಇದೆ.
ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಪರಮೇಶ್ವರ್ ವಿರುದ್ಧ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ, ಶಾಸಕರನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. 
ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಸಿಎಂ ಸಿದ್ದರಾಮಯ್ಯ ಯುರೋಪ್ ಪ್ರವಾಸದಲ್ಲಿರುವ
ವೇಳೆ ಪರಮೇಶ್ವರ್ , ಈ ಔತಣ ಕೂಟ ಆಯೋಜಿಸಿದ್ದಾರೆ.  ಜೆಡಿಎಸ್ ತಾಳಕ್ಕೆ ತಕ್ಕಂತೆ ಪರಮೇಶ್ವರ್ ಕುಣಿಯುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ,  ಈ ಉಪಹಾರ ಕೂಟದಲ್ಲಿ ಶಾಸಕರು ಹಾಗೂ ಪರಮೇಶ್ವರ್  ಪರಸ್ಪರ ಮಾತುಕತೆ  ನಡೆಸಲು ಅವಕಾಶ ಸಿಗುತ್ತದೆ ಎಂದು ಪಕ್ಷದ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT