ಜಿ.ಪರಮೇಶ್ವರ್ 
ರಾಜಕೀಯ

ಸಿದ್ದರಾಮಯ್ಯ ಯೂರೋಪ್ ಪ್ರವಾಸ ಕೈಗೊಂಡಿರುವ ವೇಳೆ ಕಾಂಗ್ರೆಸ್ ಶಾಸಕರಿಗೆ ಪರಮೇಶ್ವರ್ ಉಪಹಾರ ಕೂಟ!

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಸಚಿವರಿಗೆ ...

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿದ್ದಾರೆ. 
ಏಪ್ರಿಲ್ 7 ರಂದು ಆಯೋಜಿಸಿರುವ  ಉಪಹಾರ ಕೂಟಕ್ಕೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ  ಕೂಡ ಭಾಗವಹಿಸುವ ಸಾದ್ಯತೆ ಇದೆ.
ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಪರಮೇಶ್ವರ್ ವಿರುದ್ಧ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ, ಶಾಸಕರನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. 
ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಸಿಎಂ ಸಿದ್ದರಾಮಯ್ಯ ಯುರೋಪ್ ಪ್ರವಾಸದಲ್ಲಿರುವ
ವೇಳೆ ಪರಮೇಶ್ವರ್ , ಈ ಔತಣ ಕೂಟ ಆಯೋಜಿಸಿದ್ದಾರೆ.  ಜೆಡಿಎಸ್ ತಾಳಕ್ಕೆ ತಕ್ಕಂತೆ ಪರಮೇಶ್ವರ್ ಕುಣಿಯುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ,  ಈ ಉಪಹಾರ ಕೂಟದಲ್ಲಿ ಶಾಸಕರು ಹಾಗೂ ಪರಮೇಶ್ವರ್  ಪರಸ್ಪರ ಮಾತುಕತೆ  ನಡೆಸಲು ಅವಕಾಶ ಸಿಗುತ್ತದೆ ಎಂದು ಪಕ್ಷದ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT