ಯಧುವೀರ್ ಒಡೆಯರ್ 
ರಾಜಕೀಯ

ರಾಜಕೀಯಕ್ಕೆ ಮೈಸೂರು ಮಹಾರಾಜ ಯಧುವೀರ್ ಎಂಟ್ರಿ? ಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧೆ?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಮಲವನ್ನು ಅರಳಿಸಲು ಬಿಜೆಪಿ ತಂತ್ರ ಹೆಣೆದಿದ್ದು ಮೈಸೂರು ಮಹಾರಾಜರಾದ ಯಧುವೀರ್ ಒಡೆಯರ್...

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಮಲವನ್ನು ಅರಳಿಸಲು ಬಿಜೆಪಿ ತಂತ್ರ ಹೆಣೆದಿದ್ದು ಮೈಸೂರು ಮಹಾರಾಜರಾದ ಯಧುವೀರ್ ಒಡೆಯರ್ ರನ್ನು ಮಂಡ್ಯದಲ್ಲಿ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. 
ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯವಿದ್ದು ಹೀಗಾಗಿ ಮೈಸೂರು ರಾಜಮನೆತನವನ್ನು ಮಂಡ್ಯಕ್ಕೆ ಕರೆತರಲು ಬಿಜೆಪಿ ಸಿದ್ಧತೆ ನಡೆಸಿದ್ದು ಈ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ಮಣಿಸಲು ತಂತ್ರ ರೂಪಿಸುತ್ತಿದೆ. 
ಬಿಜೆಪಿಯು ಅದಾಗಲೇ ಯಧುವೀರ್ ಒಡೆಯರ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ. ಇನ್ನು ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸಹ ಒಡೆಯರ್ ಅವರನ್ನೇ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. 
ಯಧುವೀರ್ ಅವರು ಮಂಡ್ಯದಿಂದ ಸ್ಪರ್ಧಿಸಿದರೆ ಸಕ್ಕರೆ ನಾಡಿನ ಜನರು ಅವರ ಕೈ ಹಿಡಿಯುವ ಸಾಧ್ಯತೆ ಹೆಚ್ಚು ಎಂಬ ವಿಚಾರ ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT