ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ಬಿಜೆಪಿ ಕಾರ್ಯಕಾರಣಿ ಸಭೆಗೆ ಗೈರು: ದೆಹಲಿಯಿಂದ ದಿಢೀರ್ ವಾಪಸ್ಸಾದ ಬಿ.ಎಸ್.ಯಡಿಯೂರಪ್ಪ

ರಾಜ್ಯ ರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಯೊಂದು ಕಂಡು ಬಂದಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಗೈರು ಹಾಜರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹಠಾತ್ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ...

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಯೊಂದು ಕಂಡು ಬಂದಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಗೈರು ಹಾಜರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹಠಾತ್ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. 
ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ. ಕಾರ್ಯಕಾರಣಿ ಸಭೆ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ರಾಜಧಾನಿ ದೆಹಲಿಗೆ ಭೇಟಿ ನಿನ್ನೆ ಸಂಜೆಯಷ್ಟೇ ತೆರಳಿದ್ದರು. 
ದೆಹಲಿಗೆ ತೆರಳಿದ 12 ತಾಸಿನಲ್ಲಿಯೇ ಯಡಿಯೂರಪ್ಪ ಅವರು ಇದೀಗ ಬೆಂಗಳೂರಿಗೆ ಹಠಾತ್ ವಾಪಸ್ಸಾಗಿರುವುದು ಹಲವು ಅನುಮಾನ ಗಳಿಗೆ ಎಡೆಮಾಡಿಕೊಟ್ಟಿದೆ. 
ಯಡಿಯೂರಪ್ಪ ಅವರ ಕುಟುಂಬದ ಮೂಲಗಳ ಪ್ರಕಾರ, ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡುವ ಸಲುವಾಗಿ ಯಡಿಯೂರಪ್ಪ ಅವರು ವಾಪಸ್ಸಾಗುತ್ತಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ತೊರೆಗು ವಾಪಸ್ಸಾಗಿರುವುದು ಕೇವಲ ಸ್ವಾಮೀಜಿ ಭೇಟಿ ಮಾತ್ರವಷ್ಟೇ ಅಲ್ಲ ಎನ್ನಲಾಗುತ್ತಿದೆ. 

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಶೀಘ್ರದಲ್ಲಿಯೇ ಬದಲಾವಣೆಗಳಾಗಲಿದ್ದು, ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ಬಿಜೆಪಿ ವರಿಷ್ಠರ ನಿರ್ದೇಶನದ ಮೇರೆಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT