ಜಿ ಪರಮೇಶ್ವರ 
ರಾಜಕೀಯ

ಡಿಸಿಎಂ ಪರಮೇಶ್ವರ ವಿದೇಶ ಪ್ರವಾಸಕ್ಕೆ ಕೈಕಮಾಂಡ್ ಬ್ರೇಕ್

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸೋಮವಾರ ದಿಢೀರ್ ತಮ್ಮ ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸೋಮವಾರ ದಿಢೀರ್ ತಮ್ಮ  ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.
ಪರಮೇಶ್ವರ ಅವರು ಜಾಗತಿಕ ತಾಪಮಾನಕ್ಕೆ ಸಂಬಂಧಿಸಿದ ಸಮ್ಮೇಳನದಲ್ಲಿ ಭಾಗವಹಿಸುವುದ್ಕಾಗಿ ಇಂದು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳಬೇಕಿತ್ತು. ಆದರೆ ಹೈಕಮಾಂಡ್ ಏಕಾಏಕಿ ಪರಮೇಶ್ವರ ಅವರ ಪ್ರವಾಸಕ್ಕೆ ಬ್ರೇಕ್ ಹಾಕಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸದಿಂದ ವಾಪಸ್ ಬರುವವರೆಗೆ ಬೆಂಗಳೂರಿನಲ್ಲಿಯೇ ಇದ್ದು ಶಾಸಕರ ಚಲನವಲನದ ನಿಗಾ ವಹಿಸುವಂತೆ ಸೂಚಿಸಿದೆ.
ರಾಜ್ಯದಲ್ಲಿ ರಾಜಕೀಯ ಪರಿಸ್ಥಿತಿ ಅಷ್ಟು ಚೆನ್ನಾಗಿಲ್ಲ. ಬಿಜೆಪಿ ಸದ್ದಿಲ್ಲದೇ ರಹಸ್ಯ ಚಟುವಟಿಕೆ ನಡೆಸುತ್ತಿದೆ. ಆಪರೇಷನ್ ಕಮಲ ನಡೆಸಲು ಬಿಜೆಪಿ ಪ್ಲಾನ್ ಮಾಡುತ್ತಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ವಿದೇಶ ಪ್ರವಾಸದಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಶಾಸಕರ ಮೇಲೆ ನಿಗಾ ಇಡಲು ನಾಯಕರೇ ಇಲ್ಲದಾದರೆ ಕಷ್ಟ ಅಂತ ಹೈಕಮಾಂಡ್ ಪರಮೇಶ್ವರಗೆ ಹೇಳಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT