ಸಿಎಂ ಕುಮಾರಸ್ವಾಮಿ 
ರಾಜಕೀಯ

ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಎಂದಿಗೂ ನನಸಾಗದು: ಸಿಎಂ ಕುಮಾರಸ್ವಾಮಿ

ಬಿಜೆಪಿ ನಾಯಕರಿಗೆ ನಾಡಿನ ಸಮಸ್ಯೆಗಿಂತ ಹೆಚ್ಚಾಗಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವುದೇ ಮುಖ್ಯ ಕೆಲಸವಾಗಿದೆ, ಆದರೆ...

ಮೈಸೂರು/ಮಂಡ್ಯ: ಬಿಜೆಪಿ ನಾಯಕರಿಗೆ ನಾಡಿನ ಸಮಸ್ಯೆಗಿಂತ ಹೆಚ್ಚಾಗಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವುದೇ ಮುಖ್ಯ ಕೆಲಸವಾಗಿದೆ, ಆದರೆ ಬಿಜೆಪಿಯವರ ಕನಸು ಎಂದಿಗೂ ನನಸಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದ್ದಾರೆ.
ಕೊಡಗಿನಲ್ಲಿ ಅತಿಯಾದ ಮಳೆಯಿಂದ ಪ್ರವಾಹ ಉಂಟಾಗಿ ಜನ ಜೀವನ ಅಯೋಮಯವಾಗಿದೆ, 86 ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಮಾತ್ರ ಪಿತೂರಿ ಮಾಡುವುದರಲ್ಲಿ ನಿರತವಾಗಿದೆ, ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯ ಪ್ರಯತ್ನಕ್ಕೆ ನಾನು ಯಾವುದೇ ಸ್ಟ್ಯಾಟರ್ಜಿ ಮಾಡುವುದಿಲ್ಲ. ರಾಜ್ಯದ ಕೆಲಸ ಮಾಡುವ ಕಡೆ ಮಾತ್ರ ಗಮನ ಹರಿಸುತ್ತೇನೆ ಎಂದು ಹೇಳಿದರು.  ಜಾರಕಿಹೊಳಿ ಸಹೋದರರು ನನ್ನ ಜತೆ ನಿತ್ಯ ಸಂಪರ್ಕದಲ್ಲಿದ್ದಾರೆ. ಆಡಳಿತ ವಿಚಾರದಲ್ಲಿ ಕಾಂಗ್ರೆಸ್‌ನವರು ತಮ್ಮ ಸಮಸ್ಯೆಯನ್ನು ತಾವೇ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT