ಪ್ರತಾಪ್ ಸಿಂಹ 
ರಾಜಕೀಯ

ನಿಮ್ಮನ್ನು ಸಂಸದರನ್ನಾಗಿ ಮಾಡಿದ್ದೇ ನಮ್ಮ ದುರಂತ: ಪ್ರತಾಪ್ ಸಿಂಹಗೆ ಬಿಜೆಪಿ ನಾಯಕನಿಂದ ಕ್ಲಾಸ್!

ಪ್ರವಾಹ ಹಾಗೂ ಭೂಕುಸಿತದಿಂದ ತತ್ತರಿಸಿರುವ ಕೊಡಗು ಜಿಲ್ಲೆಯ ಪರಿಸ್ಥಿತಿ ಪರಿಶೀಲಿಸಲು ಕೇಂದ್ರದಿಂದ ಬಂದಿದ್ದ ತಂಡಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ಸಂಸದ...

ಮಡಿಕೇರಿ: ಪ್ರವಾಹ ಹಾಗೂ ಭೂಕುಸಿತದಿಂದ ತತ್ತರಿಸಿರುವ ಕೊಡಗು ಜಿಲ್ಲೆಯ ಪರಿಸ್ಥಿತಿ ಪರಿಶೀಲಿಸಲು ಕೇಂದ್ರದಿಂದ ಬಂದಿದ್ದ ತಂಡಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ಸಂಸದ ಪ್ರತಾಪ್ ಸಿಂಹ ಅವರನ್ನು ಸ್ಥಳೀಯ ಬಿಜೆಪಿ ಮುಖಂಡ ಎಂಬಿ ದೇವಯ್ಯ ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. 
ಪ್ರತಾಪ್ ಸಿಂಹ್ ಅವರು ಕೇಂದ್ರದ ಪರಿಶೀಲನೆ ತಂಡದೊಂದಿಗೆ ಮಡಿಕೇರಿ ತಾಲೂಕಿನ ಹೆಬ್ಬೆಟ್ಟಗೇರಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಕೇಂದ್ರ ತಂಡಕ್ಕೆ ಭೂ ಪರಿವರ್ತನೆಯ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂಸದರ ಮೇಲೆ ದೇವಯ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. 
ಕೇಂದ್ರದ ಪರಿಶೀಲನೆ ತಂಡಕ್ಕೆ ನೀವು ತಪ್ಪು ಮಾಹಿತಿ ನೀಡುತ್ತಿದ್ದೀರಿ, ನಿಮ್ಮನ್ನು ಸಂಸದರನ್ನಾಗಿ ಮಾಡಿದ್ದು ನಮ್ಮ ದುರಂತ. ತಪ್ಪು ಮಾಹಿತಿ ನೀಡಿ ಜನರನ್ನು ಒಕ್ಕಲೆಬ್ಬಿಸಲು ಯತ್ನಿಸುತ್ತಿದ್ದೀರಿ. ಬೆಂದ ಗಾಯಕ್ಕೆ ಉಪ್ಪು ನೀರು ಸುರಿಯುತ್ತಿದ್ದೀರಾ ಎಂದು ದೇವಯ್ಯ ಹರಿಹಾಯ್ದರು. 
ಇನ್ನು ನಿಮ್ಮಂಥವರಿಂದ ಪಕ್ಷ ಉದ್ಧಾರ ಆಗಲ್ಲ. ನೀವು ಮೊದಲು ನಮ್ಮ ಪಕ್ಷದ ಸಂಸದ ಎಂಬುದನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪಕ್ಷದಲ್ಲಿ ನನ್ನ ವಿರುದ್ಧ ಏನು ಕ್ರಮ ತೆಗೆದುಕೊಳ್ಳುತ್ತೀರೋ ತೆಗೆದುಕೊಳ್ಳಿ ಎಂದು ಖಾರವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT