ಡಿ. ಕೆ. ಶಿವಕುಮಾರ್ 
ರಾಜಕೀಯ

ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಅಪೇಕ್ಷೆಯಿಂದ ತೀವ್ರತರ ಬಿಕ್ಕಟ್ಟು ?

ಬೆಳಗಾವಿಯ ಜಾರಕಿಹೊಳಿ ಸಹೋದರರು ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಅವರ ನಡುವಿನ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉಂಟಾಗಿದೆ ಎಂದು ಎಸಿಸಿಸಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ಬೆಳಗಾವಿಯ ಜಾರಕಿಹೊಳಿ  ಸಹೋದರರು ಹಾಗೂ ಜಲಸಂಪನ್ಮೂಲ ಸಚಿವ  ಡಿ. ಕೆ. ಶಿವಕುಮಾರ್ ಅವರ ನಡುವಿನ  ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಕಾಂಗ್ರೆಸ್ ನಲ್ಲಿ    ಬಿಕ್ಕಟ್ಟು ಉಂಟಾಗಿದೆ ಎಂದು ಎಸಿಸಿಸಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಬೆಳಗಾವಿ ರಾಜಕೀಯದಲ್ಲಿ ಡಿ. ಕೆ. ಶಿವಕುಮಾರ್ ತನ್ನ ಪ್ರಭಾವ ಬೀರಲು ಪ್ರಯತ್ನಿಸಿದದ್ದು,  ರಾಜ್ಯಸರ್ಕಾರಕ್ಕೆ ಮುಳುವಾಗಿ ಪರಿಣಮಿಸಿದೆ ಎಂದು  ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಡಿ. ಕೆ. ಶಿವಕುಮಾರ್ ರಾಜಕೀಯ ಹಸ್ತಕ್ಷೇಪ ಕುರಿತ  ಭಿನ್ನಾಭಿಪ್ರಾಯ ಈಗ  ಬೆಳಗಾವಿಯಿಂದ ಬಳ್ಳಾರಿಯಲ್ಲೂ  ವ್ಯಾಪಿಸಿದೆ. ಅಲ್ಲಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು,  ಸ್ಥಳೀಯ ವಿಚಾರಗಳಲ್ಲಿ ಡಿ. ಕೆ. ಶಿವಕುಮಾರ್ ಪ್ರಾಬಲ್ಯವನ್ನು ಜಿಲ್ಲೆಯ ಶಾಸಕರು ಸಹಿಸುತ್ತಿಲ್ಲ ಎಂಬುದು  ತಿಳಿದುಬಂದಿದೆ.

ಅಲ್ಲದೇ ಡಿ. ಕೆ. ಶಿವಕುಮಾರ್  ಉತ್ತರ ಕರ್ನಾಟಕ ಭಾಗದ ಬಹುತೇಕ ನೀರಾವರಿ ಯೋಜನೆಗಳ ಉಸ್ತುವಾರಿ ವಹಿಸಿದ್ದು, ಮುಖ್ಯಮಂತ್ರಿ ಅಪೇಕ್ಷೆಯಿಂದಾಗಿ  ರಾಜ್ಯಾದ್ಯಂತ ತನ್ನ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ.

ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಜಗಳ ಹಿಂದೆ  ಡಿ. ಕೆ. ಶಿವಕುಮಾರ್  ಅವರ ಕೈವಾಡವಿರುವ ಬಗ್ಗೆಗೆ ಪಕ್ಷದ ಒಳಗಿನವರೇ ಹೇಳುತ್ತಾರೆ.
ಉತ್ತರ ಕರ್ನಾಟಕದಲ್ಲಿ ಡಿ. ಕೆ. ಶಿವಕುಮಾರ್ ಅಷ್ಟಾಗಿ ಪರಿಚಯವಿಲ್ಲ. ಆದರೆ, ಲಕ್ಷ್ಮಿ ಹೆಬ್ಬಾಳ್ ಕರ್ ಚಿರಪರಿಚಿತ. ಹಾಗಾಗೀ ಬಲವಾದ ಧ್ವನಿಯಿಲ್ಲದ ಅಭ್ಯರ್ಥಿಗಳನ್ನು ಶಿವಕುಮಾರ್  ಬೆಂಬಲಿಸುವ ಮೂಲಕ ಸರಿಯಾದ ವೇಳೆಯಲ್ಲಿ  ಲಾಭ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ ಎಂದು  ಧಾರವಾಡ ಕರ್ನಾಟಕ ವಿವಿ ಪ್ರೊಫೆಸರ್ ಡಾ. ಹರೀಶ್ ರಾಮಸ್ವಾಮಿ ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT