ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ 
ರಾಜಕೀಯ

ಅಸಮಾಧಾನವಿದ್ದರೆ ಸಿಎಂ, ವರಿಷ್ಠರ ಬಳಿ ಬಂದು ಹೇಳಲಿ: ಜಾರಕಿಹೊಳಿ ಬ್ರದರ್ಸ್'ಗೆ ಪರಮೇಶ್ವರ್

ಅಸಮಾಧಾನವಿದ್ದರೆ, ಮುಖ್ಯಂತ್ರಿ, ನನ್ನ ಬಳಿ ಅಥವಾ ಪಕ್ಷದ ವರಿಷ್ಟರ ಬಳಿ ಬಂದು ಹೇಳಲಿ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಜಾರಕಿಹೊಳಿ ಸಹೋದರರಿಗೆ ಪರೋಕ್ಷವಾಗಿ ಗುರುವಾರ ಎಚ್ಚರಿಕೆ...

ಬೆಂಗಳೂರು: ಅಸಮಾಧಾನವಿದ್ದರೆ, ಮುಖ್ಯಂತ್ರಿ, ನನ್ನ ಬಳಿ ಅಥವಾ ಪಕ್ಷದ ವರಿಷ್ಟರ ಬಳಿ ಬಂದು ಹೇಳಲಿ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಜಾರಕಿಹೊಳಿ ಸಹೋದರರಿಗೆ ಪರೋಕ್ಷವಾಗಿ ಗುರುವಾರ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ. 
ಗಣೇಶ ಚತುರ್ತಿ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಶುಭಕೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಜಾರಕಿಹೊಳಿ ಸಹೋದರರ ಅಸಮಾಧಾನಕ್ಕೆ ನಾವು ಬಗ್ಗುವುದಿಲ್ಲ. ಬಿಕ್ಕಟ್ಟುಗಳಿಗೆ ಕಡಿವಾಣ ಹಾಕುತ್ತೇವೆ. ಶೀಘ್ರದಲ್ಲಿಯೇ ಸಮಸ್ಯೆಯನ್ನು ಬಗೆಹರಿಸುತ್ತೇವೆಂದು ಹೇಳಿದ್ದಾರೆ. 
132 ವರ್ಷಗಳಿಂದ ಕಾಂಗ್ರೆಸ್ ಏಳು-ಬೀಳುಗಳನ್ನು ನೋಡುತ್ತಾ ಬಂದಿದೆ, ಜಾರಕಿಹೊಳಿ ಸಹೋದರರಿಗೆ ಅಸಮಾಧಾನಗಳಿದ್ದರೆ, ನನ್ನ ಬಳಿ, ಮುಖ್ಯಮಂತ್ರಿಗಳ ಬಳಿ ಅಥವಾ ಪಕ್ಷದ ವರಿಷ್ಠರ ಬಳಿ ಬಂದು ಹೇಳಲಿ ಎಂದು ಹೇಳಿದ್ದಾರೆ. 
ಇದೇ ವೇಳೆ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ಕುರಿತ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಪಕ್ಷದ ಕಚೇರಿ ಕಟ್ಟಲು ಡಿಕೆ.ಶಿವಕುಮಾರ್ ಅವರಿದೆ ಜವಾಬ್ದಾರಿ ನೀಡಲಾಗಿತ್ತು. ಹೀಗಾಗಿ ಅವರು ಹೋಗಿ ಬರುತ್ತಿದ್ದರು. ಆದರೆ, ಬೆಳಗಾವಿ ರಾಜಕೀಯಕ್ಕೆ ಅವರು ಕೈ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT