ಮಾಜಿ ಪ್ರಧಾನಿ ದೇವೇಗೌಡ 
ರಾಜಕೀಯ

ಮಾಧ್ಯಮಗಳು ಸರ್ಕಾರ ಬೀಳುವುದನ್ನೇ ಕಾಯುತ್ತಿವೆ: ಮಾಜಿ ಪ್ರಧಾನಿ ದೇವೇಗೌಡ

ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಗಳಿಗಿಂದಲೂ ಸರ್ಕಾರ ಪತನಗೊಳ್ಳುವುದೇ ಮಾಧ್ಯಮಗಳಿಗೆ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ...

ಶಿವಮೊಗ್ಗ: ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಗಳಿಗಿಂದಲೂ ಸರ್ಕಾರ ಪತನಗೊಳ್ಳುವುದೇ ಮಾಧ್ಯಮಗಳಿಗೆ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಾಧ್ಯಮಗಳ ವಿರುದ್ಧ ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ. 
ಮಲೆನಾಡು ಕ್ರೆಡಿಟ್ ಕೋ ಆಪ್ ಸೊಸೈಟಿಯ ರಜತ ಮಹೋತ್ಸವ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳ ಮೇಲೆ ನನಗೆ ಗೌರವವಿದೆ. ಆದರೆ, ಮಾಧ್ಯಮಗಳಲ್ಲಿ ಸಿಎಂ ಕುಮಾರಸ್ವಾಮಿಯವರು ಸಾಧನೆಗಳಿಗಿಂತಲೂ ಸರ್ಕಾರ ಉರುಳುವ ಕುರಿತು ಹೆಚ್ಚು ಚರ್ಚೆಗಳು ನಡೆಯುತ್ತಿವೆ. ಇದು ಅವಶ್ಯಕವೇ ಎಂದು ಪ್ರಶ್ನಿಸಿದ್ದಾರೆ. 
ಕುಮಾರಸ್ವಾಮಿಯವರು ರಾಜ್ಯದ ರೈತರ ಸಹಕಾರಿ ಸಂಘದ ಸಾಲಮನ್ನಾ ಮಾಡಿದರು. ಖಾಸಗಿ ಸಾಲಮನ್ನಾ ಮಾಡಿದರು. ಉತ್ತಮ ಯೋಜನೆಗಳನ್ನು ಜಾರಿಗೆ ತರಲು ಯತ್ನ ನಡೆಸುತ್ತಿದ್ದಾರೆ. ಈ ಕುರಿತು ಮಾಧ್ಯಮಗಳು ಚರ್ಚಿಸುತ್ತಿಲ್ಲ. ಸಾಧನೆಗಿಂತ ಸರ್ಕಾರ ಉರುಳುವುದೇ ಮಾಧ್ಯಮದವರಿಗೆ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT