ಶಿವಮೊಗ್ಗ: ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಗಳಿಗಿಂದಲೂ ಸರ್ಕಾರ ಪತನಗೊಳ್ಳುವುದೇ ಮಾಧ್ಯಮಗಳಿಗೆ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಾಧ್ಯಮಗಳ ವಿರುದ್ಧ ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಮಲೆನಾಡು ಕ್ರೆಡಿಟ್ ಕೋ ಆಪ್ ಸೊಸೈಟಿಯ ರಜತ ಮಹೋತ್ಸವ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳ ಮೇಲೆ ನನಗೆ ಗೌರವವಿದೆ. ಆದರೆ, ಮಾಧ್ಯಮಗಳಲ್ಲಿ ಸಿಎಂ ಕುಮಾರಸ್ವಾಮಿಯವರು ಸಾಧನೆಗಳಿಗಿಂತಲೂ ಸರ್ಕಾರ ಉರುಳುವ ಕುರಿತು ಹೆಚ್ಚು ಚರ್ಚೆಗಳು ನಡೆಯುತ್ತಿವೆ. ಇದು ಅವಶ್ಯಕವೇ ಎಂದು ಪ್ರಶ್ನಿಸಿದ್ದಾರೆ.
ಕುಮಾರಸ್ವಾಮಿಯವರು ರಾಜ್ಯದ ರೈತರ ಸಹಕಾರಿ ಸಂಘದ ಸಾಲಮನ್ನಾ ಮಾಡಿದರು. ಖಾಸಗಿ ಸಾಲಮನ್ನಾ ಮಾಡಿದರು. ಉತ್ತಮ ಯೋಜನೆಗಳನ್ನು ಜಾರಿಗೆ ತರಲು ಯತ್ನ ನಡೆಸುತ್ತಿದ್ದಾರೆ. ಈ ಕುರಿತು ಮಾಧ್ಯಮಗಳು ಚರ್ಚಿಸುತ್ತಿಲ್ಲ. ಸಾಧನೆಗಿಂತ ಸರ್ಕಾರ ಉರುಳುವುದೇ ಮಾಧ್ಯಮದವರಿಗೆ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos