ಮಾಜಿ ಪ್ರಧಾನಿ ದೇವೇಗೌಡ 
ರಾಜಕೀಯ

ಮಾಧ್ಯಮಗಳು ಸರ್ಕಾರ ಬೀಳುವುದನ್ನೇ ಕಾಯುತ್ತಿವೆ: ಮಾಜಿ ಪ್ರಧಾನಿ ದೇವೇಗೌಡ

ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಗಳಿಗಿಂದಲೂ ಸರ್ಕಾರ ಪತನಗೊಳ್ಳುವುದೇ ಮಾಧ್ಯಮಗಳಿಗೆ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ...

ಶಿವಮೊಗ್ಗ: ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಗಳಿಗಿಂದಲೂ ಸರ್ಕಾರ ಪತನಗೊಳ್ಳುವುದೇ ಮಾಧ್ಯಮಗಳಿಗೆ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಾಧ್ಯಮಗಳ ವಿರುದ್ಧ ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ. 
ಮಲೆನಾಡು ಕ್ರೆಡಿಟ್ ಕೋ ಆಪ್ ಸೊಸೈಟಿಯ ರಜತ ಮಹೋತ್ಸವ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳ ಮೇಲೆ ನನಗೆ ಗೌರವವಿದೆ. ಆದರೆ, ಮಾಧ್ಯಮಗಳಲ್ಲಿ ಸಿಎಂ ಕುಮಾರಸ್ವಾಮಿಯವರು ಸಾಧನೆಗಳಿಗಿಂತಲೂ ಸರ್ಕಾರ ಉರುಳುವ ಕುರಿತು ಹೆಚ್ಚು ಚರ್ಚೆಗಳು ನಡೆಯುತ್ತಿವೆ. ಇದು ಅವಶ್ಯಕವೇ ಎಂದು ಪ್ರಶ್ನಿಸಿದ್ದಾರೆ. 
ಕುಮಾರಸ್ವಾಮಿಯವರು ರಾಜ್ಯದ ರೈತರ ಸಹಕಾರಿ ಸಂಘದ ಸಾಲಮನ್ನಾ ಮಾಡಿದರು. ಖಾಸಗಿ ಸಾಲಮನ್ನಾ ಮಾಡಿದರು. ಉತ್ತಮ ಯೋಜನೆಗಳನ್ನು ಜಾರಿಗೆ ತರಲು ಯತ್ನ ನಡೆಸುತ್ತಿದ್ದಾರೆ. ಈ ಕುರಿತು ಮಾಧ್ಯಮಗಳು ಚರ್ಚಿಸುತ್ತಿಲ್ಲ. ಸಾಧನೆಗಿಂತ ಸರ್ಕಾರ ಉರುಳುವುದೇ ಮಾಧ್ಯಮದವರಿಗೆ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT