ಎಚ್.ಡಿ ಕುಮಾರ ಸ್ವಾಮಿ 
ರಾಜಕೀಯ

ಹಿಟ್ ಅಂಡ್ ರನ್ ಕುಮಾರಸ್ವಾಮಿ ತಾವು ಮಾಡಿರುವ ಆರೋಪಗಳನ್ನು ಸಾಬೀತುಪಡಿಸಲಿ: ಬಿಜೆಪಿ...

ಜೆಡಿಎಸ್ -ಕಾಂಗ್ರೆಸ್ ಸರ್ಕಾರ ಕೆಡವಲು ಹಣ ಸಂಗ್ರಹಕ್ಕೆ ಬಿಜೆಪಿ ಕಿಂಗ್‌ಪಿನ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ -ಕಾಂಗ್ರೆಸ್ ಸರ್ಕಾರ ಕೆಡವಲು ಹಣ ಸಂಗ್ರಹಕ್ಕೆ ಬಿಜೆಪಿ ಕಿಂಗ್‌ಪಿನ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಜೊತೆಗೆ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸುವಂತೆ ಸವಾಲು ಹಾಕಿದೆ.
ಅನುಕಂಪ ಗಿಟ್ಟಿಸಲು ಮಾಫಿಯಾಗಳ ಹೆಗಲ ಮೇಲೆ ಬಂದೂಕು ಇಟ್ಟು ಬಿಜೆಪಿಗೆ  ಕುಮಾರಸ್ವಾಮಿ ಗುಂಡು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದೆ.
ಒಬ್ಬ ಮುಖ್ಯಮಂತ್ರಿಯಾಗಿ ಅಧಿಕಾರವಿದ್ದರೂ.  ಇಸ್ಪೀಟ್‌ ಮಾಫಿಯಾ, ರಿಯಲ್‌ ಎಸ್ಟೇಟ್‌ ಮಾಫಿಯಾ, ಮೀಟರ್‌ ಬಡ್ಡಿ ಮಾಫಿಯಾ, ಲಾಟರಿ ಮಾಫಿಯಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದಾದರೆ ಈ ಸರ್ಕಾರ ಯಾವ ಮಟ್ಟಕ್ಕೆ ತಲುಪಿದೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ದೂರಿದ್ದಾರೆ, 
ಅಂತಹ ಮಾಫಿಯಾಗಳ ವಿರುದ್ಧ  ಕ್ರಮ ಕೈಗೊಳ್ಳಲು ಸಾಧ್ಯವಾಗದಿದ್ದರೆ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದ್ದಾರೆ,
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್‌.ರವಿಕುಮಾರ್‌, ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಮತ್ತು ಶಾಸಕ ಎಂ.ಪಿ.ರೇಣುಕಾಚಾರ್ಯ, ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಅವರ ಭಾರಕ್ಕೆ ಅವರೇ ಕುಸಿಯುತ್ತಿದ್ದಾರೆ. ಒಳಗೊಳಗೆ ಆದರೆ, ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿಯನ್ನು ಎಳೆತರುತ್ತಿದ್ದಾರೆ ಎಂದು ಆರೋಪಿಸಿದರಲ್ಲದೆ, ಒಂದೊಮ್ಮೆ ಸರ್ಕಾರ ಅಲ್ಪಮತಕ್ಕೆ ಕುಸಿದರೆ 104 ಶಾಸಕರನ್ನು ಹೊಂದಿರುವ ಬಿಜೆಪಿ ಕಡಲೇಕಾಯಿ ತಿನ್ನುತ್ತಾ ಕುಳಿತುಕೊಳ್ಳಲು ಸಾಧ್ಯವಿಲ್ಲ, ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT