ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಸಮ್ಮಿಶ್ರ ಸರ್ಕಾರ ಉಳಿಸುವ ಹೊಣೆ ಸಿದ್ದರಾಮಯ್ಯ ಹೆಗಲಿಗೆ ಹಾಕಿದ ಕಾಂಗ್ರೆಸ್ ಹೈಕಮಾಂಡ್!

12 ದಿನಗಳ ಯುರೋಪ್ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ಸಾದ ಕೆಲವೇ ಗಂಟೆಗಳಲ್ಲಿ, ಸಮ್ಮಿಶ್ರ ಸರ್ಕಾರದ...

ಬೆಂಗಳೂರು: 12 ದಿನಗಳ ಯುರೋಪ್ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ಸಾದ ಕೆಲವೇ ಗಂಟೆಗಳಲ್ಲಿ, ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟನ್ನು ಶಮನ ಮಾಡುವ ಕೆಲಸವನ್ನು ಕಾಂಗ್ರೆಸ್ ಹೈಕಮಾಂಡ್ ಅವರಿಗೊಪ್ಪಿಸಿತು.

ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ಉಲ್ಭಣಗೊಂಡ ನಂತರ ಕಾಂಗ್ರೆಸ್ ನಲ್ಲಿನ ಭಿನ್ನಾಭಿಪ್ರಾಯಗಳನ್ನು ಶಮನ ಮಾಡುವ ಕೆಲಸಕ್ಕೆ ಯುರೋಪ್ ಪ್ರವಾಸ ಮುಗಿಸಿ ಬಂದ ಕೂಡಲೇ ಕಾರ್ಯತತ್ಪರರಾದ ಸಿದ್ದರಾಮಯ್ಯನವರ ನಿವಾಸಕ್ಕೆ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಮಿಸಿದರು. ಮೈತ್ರಿ ಸರ್ಕಾರದಲ್ಲಿನ ಬಿಕ್ಕಟ್ಟನ್ನು ಶಮನಗೊಳಿಸಲು ಚರ್ಚೆ, ಮಾತುಕತೆಯನ್ನು ನಾಯಕರು ನಡೆಸಿದರು.

ಸಮ್ಮಿಶ್ರ ಸರ್ಕಾರದಲ್ಲಿ ಜಾರಕಿಹೊಳಿ ಸಹೋದರರಿಂದ ಉಂಟಾಗಿರುವ ಗೊಂದಲ ಬಗೆಹರಿಸುವ ಹೊಣೆಗಾರಿಕೆಯನ್ನು ಕಾಂಗ್ರೆಸ್ ಹೈಕಮಾಂಡ್, ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯನವರಿಗೆ ವಹಿಸಿದ್ದು, ಅಷ್ಟೇ ಅಲ್ಲದೆ ಸಮ್ಮಿಶ್ರ ಸರ್ಕಾರದ ಬಗ್ಗೆ ಅನಗತ್ಯ ಹೇಳಿಕೆ ನೀಡದಂತೆ ಬೆಂಬಲಿಗ ಸಚಿವರು ಹಾಗೂ ಶಾಸಕರಿಗೆ ತಿಳಿಹೇಳುವಂತೆಯೂ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕೆ ಸಿ ವೇಣುಗೋಪಾಲ್, ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ರಾಷ್ಟ್ರದ ಮುಂದಿನ ರಾಜಕೀಯದ ದೃಷ್ಟಿಯಿಂದ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರಬೇಕು.  ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿವರು ಕರ್ನಾಟಕದ ಬೆಳವಣಿಗೆ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಇದಕ್ಕೆ ಸಿದ್ದರಾಮಯ್ಯ ಅವರು, ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಆಗುವುದಿಲ್ಲ. ಕೆಲವೊಂದು ಬೇಸರ ಇರಬಹುದು, ಅದನ್ನು ಸರಿಪಡಿಸೋಣ. ನನಗೆ ಸಂಪೂರ್ಣ ಮಾಹಿತಿಯಿಲ್ಲ, ನಾನು ಅವರನ್ನು ಕರೆದು ಮಾತನಾಡಿಸುತ್ತೇನೆ ಎಂದು ಹೇಳಿದರು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT