ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ದಂಗೆ ಎಂದರೆ ಜನರು ಪ್ರತಿಭಟಿಸುತ್ತಾರೆ ಎಂದರ್ಥ, ಇದರಲ್ಲಿ ತಪ್ಪೇನಿದೆ: ಸಿಎಂ ಕುಮಾರಸ್ವಾಮಿ

ದಂಗೆ ಅಂದರೆ ಜನರು ಪ್ರತಿಭಟಿಸುತ್ತಾರೆಂದು ಅರ್ಥ. ಇದರಲ್ಲಿ ತಪ್ಪೇನಿದೆ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಹೇಳಿಕೆಗೆ ಗುರುವಾರ ಸ್ಪಷ್ಟನೆ ನೀಡಿದ್ದಾರೆ...

ಬೆಂಗಳೂರು: ದಂಗೆ ಅಂದರೆ ಜನರು ಪ್ರತಿಭಟಿಸುತ್ತಾರೆಂದು ಅರ್ಥ. ಇದರಲ್ಲಿ ತಪ್ಪೇನಿದೆ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಹೇಳಿಕೆಗೆ ಗುರುವಾರ ಸ್ಪಷ್ಟನೆ ನೀಡಿದ್ದಾರೆ. 
ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನ ನಡೆಸುತ್ತಿದ್ದು, ಹೀಗಾದರೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಜನರಿಗೆ ಕರೆ ನೀಡಬೇಕಾಗುತ್ತದೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಗುರುವಾರ ತೀವ್ರ ಹಗ್ಗಜಗ್ಗಾಟಕ್ಕೆ ಕಾರಣವಾಗಿತ್ತು. 
ಕುಮಾರಸ್ವಾಮಿಯವರು ಹೇಳಿಕೆ ನೀಡುತ್ತಿದ್ದಂತೆಯೇ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ಯಡಿಯೂರಪ್ಪ ನಿವಾಸದ ಮನೆಯ ಮೇಲೆ ದಾಳಿ ನಡೆಸಿದ್ದರು. ಇದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.
ಇದರ ಬೆನ್ನಲ್ಲೇ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿಯವರು, ದಂಗೆ ಅಂದರೆ, ಜನರು ಪ್ರತಿಭಟಿಸುತ್ತಾರೆಂದು ಅರ್ಥ. ಇದರಲ್ಲಿ ತಪ್ಪೇನಿದೆ? ಯಡಿಯೂರಪ್ಪ ಹಿಂದೆ ದೊಣ್ಣೆ, ಬಡಿಗೆ ಹಿಡಿದು ಪ್ರತಿಭಟನೆ ಮಾಡುತ್ತೇವೆಂದು ಹೇಳಿದ್ದರು. ಬಿಜೆಪಿಯವರು ರಾಜ್ಯಪಾಲರಿಗೇ ಅಲ್ಲ, ರಾಷ್ಟ್ರಪತಿಗಳಿಗೂ ದೂರು ನೀಡಲಿ. ನಾನು ಹೆದರುವುದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT