ಕುಮಾರಸ್ವಾಮಿ ಮತ್ತು ರೇವಣ್ಣ ಜೊತೆ ಎಚ್.ಡಿ ದೇವೇಗೌಡ 
ರಾಜಕೀಯ

'ಭೂ ಕಬಳಿಕೆ ವಿಷಯದಲ್ಲಿ ಎಚ್.ಡಿ ದೇವೇಗೌಡ ಮತ್ತವರ ಮಕ್ಕಳು ಪಿಎಚ್ ಡಿಗೆ ಅರ್ಹರು'

ಭೂ ಕಬಳಿಕೆ ವಿಷಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕುಟಂಬ ಪಿಎಚ್‌ಡಿ ಗೆ ಅರ್ಹವಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ...

ಬೆಂಗಳೂರು: ಭೂ ಕಬಳಿಕೆ ವಿಷಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕುಟಂಬ ಪಿಎಚ್‌ಡಿ ಗೆ ಅರ್ಹವಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಲೇವಡಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪುಟ್ಟಸ್ವಾಮಿ,  ಗೋವಿಂದ ಖಾರಜೋಳ, ಆರ್ ಅಶೋಕ್,  ಮ್ತು ಎನ್ ರವಿ ಕುಮಾರ್ ದೇವೇಗೌಡರ ಕುಟುಂಬದ ವಿರುದ್ಧ ಮಾಜಿ ಸಚಿವ ಎ.ಮಂಜು ಮಾಡಿದ ಭೂ ಹಗರಣ ಹಾಗೂ ಕುಮಾರಸ್ವಾಮಿ ವಿರುದ್ಧ ಈಗಾಗಲೇ ದಾಖಲಾಗಿರುವ ಪ್ರಕರಣಗಳ ಕಡತ ಪ್ರದರ್ಶನ ಮಾಡಿದರು.
ಭೂ ರಹಿತರು ಎಂದು ಘೋಷಿಸಿಕೊಂಡು ಹಾಸನದಲ್ಲಿ ದೇವೇಗೌಡರು ಹಾಗೂ ಅವರ ಪತ್ನಿ ಚನ್ನಮ್ಮ ಭೂ ಮಂಜೂರು ಮಾಡಿಸಿಕೊಂಡು ಅದನ್ನು ರೇವಣ್ಣ ಅವರಿಗೆ ವರ್ಗಾಯಿಸಿದ್ದಾರೆ. ಹಾಸನದ ಹೊಳೆನರಸಿಪುರದಲ್ಲಿ 82 ಎಕರೆ ಜಾಗವನ್ನು ಈ ರೀತಿ ಕಬಳಿಸಿದ್ದೀರಿ. ನಂತರ ಅದನ್ನು ಪ್ರಜ್ವಲ್ ರೇವಣ್ಣ ಹೆಸರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಜಂತಕಲ್ ಮೈನಿಂಗ್ ಪ್ರಕರಣದಲ್ಲಿ  40 ವರ್ಷಕ್ಕೆ ಪರವಾನಗಿ ನವೀಕರಣಗೊಳಿಸಲು ಕುಮಾರ ಸ್ವಾಮಿ ಅನುಮತಿ ನೀಡಿದ್ದಾರೆ, ಜಂತಕಲ್‌ ಮೈನಿಂಗ್‌ ಪ್ರಕರಣ ಸಂಬಂಧ ಭೂಗತ ಪಾತಕಿ ವಿನೋದ್‌ ಗೋಯಲ್‌ ಜತೆ ನೀವು ನಂಟಸ್ತಿಕೆ ಹೊಂದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT