ಸಂಗ್ರಹ ಚಿತ್ರ 
ರಾಜಕೀಯ

ಶೃಂಗೇರಿ ಮಠದಲ್ಲಿ ಹೋಮ ನಡೆಸಿದ ಹೆಚ್.ಡಿ.ದೇವೇಗೌಡ ಕುಟುಂಬ

ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲದ ಕಾರ್ಮೋಡ ಕವಿದಿರುವ ನಡುವಲ್ಲೇ ಶೃಂಗೇರಿ ಮಠಕ್ಕೆ ಶನಿವಾರ ಭೇಟಿ ನೀಡಿದ ಹೆಚ್.ಡಿ.ದೇವೇಗೌಡ ಕುಟುಂಬ ಶಾರದಾಂಬೆಯ ದರ್ಶನ ಪಡೆದು ಹೋಮ ನಡೆಸಿ ವಿಶೇಷ ಪೂಜೆ ಸಲ್ಲಿಸಿದರು...

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲದ ಕಾರ್ಮೋಡ ಕವಿದಿರುವ ನಡುವಲ್ಲೇ ಶೃಂಗೇರಿ ಮಠಕ್ಕೆ ಶನಿವಾರ ಭೇಟಿ ನೀಡಿದ ಹೆಚ್.ಡಿ.ದೇವೇಗೌಡ ಕುಟುಂಬ ಶಾರದಾಂಬೆಯ ದರ್ಶನ ಪಡೆದು ಹೋಮ ನಡೆಸಿ ವಿಶೇಷ ಪೂಜೆ ಸಲ್ಲಿಸಿದರು. 
ಬೆಳಿಗ್ಗೆ 8.30ಕ್ಕೆ ತಂದೆ ಹೆಚ್.ಡಿ.ದೇವೇಗೌಡ, ತಾಯಿ ಚೆನ್ನಮ್ಮ, ಸಹೋದರ ಹೆಚ್.ಡಿ.ರೇವಣ್ಣ ಹಾಗೂ ಪತ್ನಿ ಅನಿತಾ ಅವರೊಂದಿಗೆ ಮಠದ ಚಂದ್ರಸೇಖರ ಭಾರತೀ ಸಭಾಂಗಣದಲ್ಲಿ ಆಯೋಜಿಸಿದ್ದ ಮೃತ್ಯುಂಜಯ ಹೋಮ, ಪ್ರತಿಕ್ರಿಯಾ ಶೂಲಿನಿ ಯಾಗದಲ್ಲಿ ಕುಮಾರಸ್ವಾಮಿಯವರು ಪಾಲ್ಗೊಂಡರು. 
ನಂತರ ಮಠದ ನರಸಿಂಹವನದ ಗುರು ನಿವಾಸಕ್ಕೆ ತೆರಳಿ ಜಗದ್ಗುರು ಭಾರತೀ ತೀರ್ಥರು ಹಾಗೂ ಕಿರಿತ ಜಗದ್ಗುರು ವಿಧುಶೇಖರ ಭಾರತೀ ತೀರ್ಥರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. 
ಬಳಿಕ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶಂಕರಾಚಾರ್ಯ, ತೋರಣಗಣಪತಿ, ವಿದ್ಯಾಶಂಕರ ದೇಗುಲಗಳಿಗೆ ತೆರಳಿ ದರ್ಶನ ಪಡೆದರು. ಚುನಾವಣೆಗೂ ಮೊದಲು ಜನವರಿಯಲ್ಲಿ ಶೃಂಗೇರಿ ಮಠದಲ್ಲಿ ದೇವೇಗೌಡರ ಕುಟುಂಬ ಅತಿರುದ್ಧ ಮಹಾಯಾ ಕೈಗೊಂಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT