ರಾಹುಲ್ ಗಾಂಧಿ, ಡಾ. ಸುಧಾಕರ್ 
ರಾಜಕೀಯ

ನಾನು ಡಾಕ್ಟರ್ ,ಆದರೆ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲ್ಲ- ಡಾ. ಸುಧಾಕರ್

ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಮತ್ತಿತರ ಶಾಸಕರ ಗುಂಪೊಂದು ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದ್ದು, ಚೆನ್ನೈಗೆ ಹೋಗಿದೆ ಎಂಬ ಊಹಾಪೋಹಗಳಿಗೆ ಸುಧಾಕರ್ ತೆರೆ ಎಳೆದಿದ್ದಾರೆ

ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರ ಪತನಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಆಪರೇಷನ್ ಕಾರ್ಯಾಚಾರಣೆ ನಡೆಸಲು ಯತ್ನಿಸುತ್ತಿದೆ ಎಂಬ ಊಹಾಪೋಹಗಳ ನಡುವೆ   ಚಿಕ್ಕಬಳ್ಳಾಪುರ ಶಾಸಕ  ಡಾ. ಸುಧಾಕರ್ ಮತ್ತಿತರ ಶಾಸಕರ ಗುಂಪೊಂದು  ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದ್ದು, ಚೆನ್ನೈಗೆ ಹೋಗಿದೆ ಎಂಬ ಮಾಹಿತಿ ಕೇಳಿಬಂದಿತ್ತು.

ಶಾಸಕ ಎಂ. ಟಿ. ಬಿ . ನಾಗರಾಜ್ ಮತ್ತಿತರ ಸ್ನೇಹಿತರೊಂದಿಗೆ  ಡಾ. ಸುಧಾಕರ್  ಚೆನ್ನೈಗೆ ತೆರಳಿದ್ದಾರೆ ಎಂಬ ಸುದ್ದಿಗಳು ಹರಿದಾಡಿತ್ತು. ಈ ಎಲ್ಲಾ ಊಹಾಪೋಹಗಳಿಗೆ ಡಾ. ಸುಧಾಕರ್  ತಮ್ಮ ಟ್ವೀಟರ್ ನಲ್ಲಿ ತೆರೆ ಎಳೆದಿದ್ದಾರೆ.

ಸ್ನೇಹಿತರೊಡನೆ ತಮಿಳುನಾಡಿನ ದೇವಸ್ಥಾನಗಳಿಗೆ ಭೇಟಿ ನೀಡಿರುವುದನ್ನೇ ರಾಜಕೀಯ ಪಿತ್ತೂರಿ ಎಂಬರ್ಥದಲ್ಲಿ ಮಾತನಾಡುತ್ತಿರುವುದು ತಮ್ಮಗೆ ದಿಗ್ರ್ಬಮೆ ಮೂಡಿಸಿದೆ. ನಾನು ಡಾಕ್ಟರ್, ಆದರೆ ಯಾವುದೇ ಆಪರೇಷನ್ ಕಾರ್ಯಗಳಲ್ಲಿ ಪಾಲ್ಗೊಳ್ಳಲ್ಲ. ನಾನು ಯಾವಾಗಲೂ ಕಾಂಗ್ರೆಸ್  ಪಕ್ಷದಲ್ಲಿಯೇ ಇರುತ್ತೇನೆ. ಕಾಂಗ್ರೆಸ್ ಪಕ್ಷದ ತತ್ವ ಆದರ್ಶ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಲ್ಲಿ ದೃಢ ನಂಬಿಕೆ ಹೊಂದಿರುವುದಾಗಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT