ಸಂಗ್ರಹ ಚಿತ್ರ 
ರಾಜಕೀಯ

ಭಿನ್ನಮತೀಯ ಶಾಸಕರ ಮೇಲೆ ಕಾಂಗ್ರೆಸ್ ಬ್ರಹ್ಮಾಸ್ತ್ರ?

ರಾಜ್ಯ ಕಾಂಗ್ರೆಸ್ ಭಿನ್ನಮತವನ್ನು ಸರಿದೂಗಿಸಲು ಕಾಂಗ್ರೆಸ್ ಹಿರಿಯ ನಾಯಕರು ನಿರ್ಧರಿಸಿದ್ದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಬಂಡಾಯ ಶಾಸಕರಿಗೆ ಎಚ್ಚರಿಕೆ ..

ಬೆಂಗಳೂರು: ರಾಜ್ಯ ಕಾಂಗ್ರೆಸ್ ಭಿನ್ನಮತವನ್ನು ಸರಿದೂಗಿಸಲು ಕಾಂಗ್ರೆಸ್ ಹಿರಿಯ ನಾಯಕರು ನಿರ್ಧರಿಸಿದ್ದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಬಂಡಾಯ ಶಾಸಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ,
ಈ ಮೊದಲು ಭಿನ್ನಮತೀಯ ಶಾಸಕರನ್ನು ಓಲೈಸಲು ಮುಂದಾಗುತ್ತಿದ್ದ ನಾಯಕರು ಈಗ ಯಾವುದೇ ಬ್ಲ್ಯಾಕ್ ಮೇಲ್ ತಂತ್ರಕ್ಕೆ ಬಗ್ಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. 
ವಿವಿಧ ತಂತ್ರಗಗಳನ್ನು ಬಳಸಿ ಬೆದರಿಕೆ ಒಡ್ಡುವ ಶಾಸಕರ ವಿರುದ್ಧ  ಎಐಸಿಸಿ ಪ್ರಧಾನ ಕಾರ್ಯದರ್ಶಿ ಬ್ರಹ್ಮಾಸ್ತ್ರ  ಪ್ರಯೋಗಕ್ಕೆ ಮುಂದಾಗಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಉಸ್ತುವಾರಿ ಕೆ,ಸಿ ವೇಣುಗೋಪಾಲ್ ಭಾನುವಾರ ಭಿನ್ನಮತೀಯ ಶಾಸಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ,
ಮಾಜಿ ಸಿಎಂ ಸಿದ್ದರಾಮಯ್ಯ ಈ ಭಿನ್ನ ಶಾಸಕರೊಂದಿಗೆ ಚರ್ಚಿಸಿದ್ದಾರೆ,ಹಾಗೇಯೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಸಂಧಾನ ನಡೆಸಿದ್ದಾರೆ.
ಸೋಮವಾರ ರಾತ್ರಿ ಸಿದ್ದರಾಮಯ್ಯ ಶಾಸಕ ಎಂಟಿಬಿ ನಾಗರಾಜ್ ಜೊತೆ ಚರ್ಚಿಸಿದ್ದಾರೆ, ಮಂಗಳವಾರ ಕೂಡ ಮಿಟಿಂಗ್ ಮುಂದುವರಿಯಲಿದೆ. ಈ ನಡುವೆ ಬಿಜೆಪಿ ತನ್ನ ಆಪರೇಷನ್ ಕಮಲ ಕೈ ಬಿಟ್ಟಿರುವುದು ಸದ್ಯದ ಮಟ್ಟಿಗೆ ಕಾಂಗ್ರೆಸ್ ನಿಟ್ಟುಸಿರು ಬಿಡುವಂತಾಗಿದೆ.
ಬೆಳಗಾವಿಯಲ್ಲಿ ತಲೆದೋರಿದ್ದ ಜಾರಕಿಹೊಳಿ ಸಹೋದರರ ಮನಸ್ತಾಪ ಹಾಗೂ ಬಂಡಾಯವನ್ನು ತಣ್ಣಗಾಗಿಸುವಲ್ಲಿ ಸದ್ಯಕ್ಕೆ ಯಶಸ್ವಿಯಾಗಿದ್ದಾರೆ,  ಆದರೆ ಈಗ ಮತ್ತೆ ಎದುರಾಗಿರುವ ಭಿನ್ನಮತಿಯ ಶಾಸಕರ ಮನವಿಗೆ ಓಗೊಡಬಾರದೆಂದು ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಆದೇಶಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್