ಜಿ. ಪರಮೇಶ್ವರ 
ರಾಜಕೀಯ

ಜೀರೋ ಟ್ರಾಫಿಕ್‌ನಿಂದ ಜನಸಾಮಾನ್ಯರಿಗೆ ತೊಂದರೆ: ಡಿಸಿಎಂ ಪರಮೇಶ್ವರ ವಿಷಾದ

ಜೀರೋ ಟ್ರಾಫಿಕ್‌ನಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವುದನ್ನು ಪ್ರಶ್ನಿಸಿದ್ದ ಮಾಧ್ಯಮಗಳ....

ಬೆಂಗಳೂರು: ಜೀರೋ ಟ್ರಾಫಿಕ್‌ನಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವುದನ್ನು ಪ್ರಶ್ನಿಸಿದ್ದ ಮಾಧ್ಯಮಗಳ ವಿರುದ್ಧವೇ ಗರಂ ಆಗಿದ್ದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರಿಗೆ ಕೆಟ್ಟ ಮೇಲೆ ಬುದ್ದಿ ಬಂದಿದ್ದು, ಈಗ ವಿಷಾದ ವ್ಯಕ್ತಪಡಿಸಿದ್ದಾರೆ.
ಜೀರೋ ಟ್ರಾಫಿಕ್ ನಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿರುವುದಕ್ಕೆ ವಿಷಾದಿಸುತ್ತೇನೆ. ಆದರೆ, ಪ್ರತಿನಿತ್ಯ ಸರ್ಕಾರದ ಹತ್ತಾರು ಕಾರ್ಯಕ್ರಮ,ಸಭೆಗಳು ಇರುವುದರಿಂದ ಸಮಯ ಪಾಲನೆ ಅನಿವಾರ್ಯ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಗೃಹ ಸಚಿವರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ನೀಡಲಾಗಿದೆ. ಸಾಧ್ಯವಾದಷ್ಟು ಟ್ರಾಫಿಕ್ ಆಗದಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಪರಮೇಶ್ವರ ಅವರು ಟ್ಟೀಟ್ ಮಾಡಿದ್ದಾರೆ.
ಪರಮೇಶ್ವರ ಅವರು ಇಂದು ಬೆಳಗ್ಗೆ ಕೊಡವ ಸಮಾಜ ಮತ್ತು ಬಿಬಿಎಂಪಿ ಸಹಯೋಗದಲ್ಲಿ ನಗರದ ಮಿಲ್ಲರ್ಸ್ ರಸ್ತೆಯ ಜಂಕ್ಷನ್ ಬಳಿ ಸ್ಥಾಪಿಸಲಾಗಿರುವ ಫೀಲ್ಡ್ ಮಾರ್ಷಲ್ ಕಾರಿಯಪ್ಪರವರ ಪ್ರತಿಮೆ ಉದ್ಘಾಟನೆಗೆ ಝಿರೋ ಟ್ರಾಫಿಕ್ ಮೂಲಕವೇ ಆಗಮಿಸಿದ್ದರು. ನಾನು ಝಿರೋ ಟ್ರಾಫಿಕ್ ತಗೆದುಕೊಳ್ಳುವುದು ಮಾಧ್ಯಮಗಳಿಗೆ ಹೊಟ್ಟೆ ಉರಿಯೇ ಎಂದು ಪರಮೇಶ್ವರ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT