ಸಿಎಸ್ ಶಿವಳ್ಳಿ, ಕುಸುಮಾ 
ರಾಜಕೀಯ

ಕುಂದಗೋಳ ಉಪ ಚುನಾವಣೆ: ಜನ ಬಯಸಿದರೆ ಕಣಕ್ಕಿಳಿಯಲು ಸಿದ್ಧ ಎಂದ ಶಿವಳ್ಳಿ ಪತ್ನಿ

ಲೋಕಸಭೆ ಚುನಾವಣೆ ಬೆನ್ನಲ್ಲೇ ಕುಂದಗೋಳ ವಿಧಾಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ಘೋಷಣೆಯಾಗಿದ್ದು, ಕ್ಷೇತ್ರದ ಜನ ಬಯಸಿದರೆ...

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಬೆನ್ನಲ್ಲೇ ಕುಂದಗೋಳ ವಿಧಾಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ಘೋಷಣೆಯಾಗಿದ್ದು, ಕ್ಷೇತ್ರದ ಜನ ಬಯಸಿದರೆ ತಾವು ಕಣಕ್ಕಿಳಿಯಲು ಸಿದ್ಧ ಎಂದು ಮಾಜಿ ಸಚಿವ ದಿ.ಸಿಎಸ್ ಶಿವಳ್ಳಿ ಅವರ ಪತ್ನಿ ಕುಸುಮಾ ಅವರು ಹೇಳಿದ್ದಾರೆ.
ಸಿಎಸ್ ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರಕ್ಕೆ ಮೇ 19ರಂದು ಚುನಾವಣೆ ನಡೆಯುತ್ತಿದ್ದು, 23ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ಹಿನ್ನೆಲೆಯಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಕುಸುಮಾ ಅವರು, ನಾನು ಓರ್ವ ಗೃಹಿಣಿಯಾಗಿ ಮನೆ ನಿಭಾಯಿಸಿದ್ದನ್ನು ಬಿಟ್ಟರೆ ಚುನಾವಣೆಯ ಒಳ-ಹೊರ ಏನೂ ಗೊತ್ತಿಲ್ಲ. ಆದರೆ ಕ್ಷೇತ್ರದ ಜನ ಬಯಸಿದರೆ ಹಾಗೂ ಪಕ್ಷದ ವರಿಷ್ಠರು ಚುನಾವಣೆಗೆ ನಿಲ್ಲುವಂತೆ ಸೂಚಿಸಿದರೆ ಕಣಕ್ಕೆ ಇಳಿಯಲು ಸಿದ್ಧ ಎಂದಿದ್ದಾರೆ.
ನನ್ನ ಪತಿ ತೀರಿಹೋದ ನಂತರ ಸಾಂತ್ವನ ಹೇಳಲು ಬಂದ ಸಾವಿರಾರು ಕಾರ್ಯಕರ್ತರು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದಾರೆ. ಜನರ ಅಭಿಪ್ರಾಯವೇ ನನ್ನ ಅಭಿಪ್ರಾಯ. ಅದು ನನ್ನ ಪತಿದೇವರ ಆರ್ಶೀವಾದ ಎಂದು ತಿಳಿಯುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT