ಸಂಗ್ರಹ ಚಿತ್ರ 
ರಾಜಕೀಯ

'ಸೈನ್ಯಕ್ಕೆ ಸೇರುವವರು 2 ಹೊತ್ತಿನ ಊಟಕ್ಕೆ ಗತಿ ಇಲ್ಲದವರು, ಮೋದಿಯಿಂದ ಸೈನಿಕರ ದುರ್ಬಳಕೆ': ಸಿಎಂ ಎಚ್ ಡಿಕೆ ಹೇಳಿಕೆಗೆ ಬಿಜೆಪಿ ಟೀಕೆ

ಸೈನ್ಯಕ್ಕೆ ಸೇರುವವರು 2 ಹೊತ್ತಿನ ಊಟಕ್ಕೆ ಗತಿ ಇಲ್ಲದವರು.. ಅಂತಹವರನ್ನು ಪ್ರಧಾನಿ ಮೋದಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಸೈನಿಕರಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಹೇಳಿದೆ.

ಬೆಂಗಳೂರು: ಸೈನ್ಯಕ್ಕೆ ಸೇರುವವರು 2 ಹೊತ್ತಿನ ಊಟಕ್ಕೆ ಗತಿ ಇಲ್ಲದವರು.. ಅಂತಹವರನ್ನು ಪ್ರಧಾನಿ ಮೋದಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಸೈನಿಕರಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಹೇಳಿದೆ.
ಈ ಬಗ್ಗೆ ವಿಡಿಯೋವೊಂದನ್ನು ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ ಸಿಎಂ ಕುಮಾಸ್ವಾಮಿ ವಿರುದ್ದ ತೀವ್ರ ಟೀಕಾ ಪ್ರಹಾರ ನಡೆಸಿದೆ. ತಮ್ಮ ಮಗನಿಗೆ ಲೋಕಸಭಾ ಚುನಾವಣಾ ಟಿಕೆಟ್ ಕೊಡಿಸುವಲ್ಲಿ ತೋರಿಸಿದ ಉತ್ಸಾಹವನ್ನು, ದೇಶ ಕಾಯಲು ಆತನನ್ನು ಸೈನ್ಯಕ್ಕೆ ಕಳುಹಿಸುವಲ್ಲಿ ಯಾಕೆ ತೋರಿಸಲಿಲ್ಲ' ಎಂದು ಬಿಜೆಪಿ ಕರ್ನಾಟಕ ಟ್ವೀಟ್‌ ಮಾಡಿದೆ. 
'ಸೈನ್ಯಕ್ಕೆ ಸೇರುವವರು ಶ್ರೀಮಂತರ ಮನೆ ಮಕ್ಕಳಲ್ಲ. ಬದಲಾಗಿ ಎರಡು ಹೊತ್ತಿನ ಊಟಕ್ಕೆ ಗತಿಯಿಲ್ಲದವರು, ಕೆಲಸವಿಲ್ಲ ಎನ್ನುವವರು ಸೈನ್ಯಕ್ಕೆ ಹೋಗಿ ಸೇರುತ್ತಾರೆ. ಇಂತಹವರನ್ನು ಪ್ರಧಾನಿ ಮೋದಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ' ಎಂದು ಸಿಎಂ ಕುಮಾರಸ್ವಾಮಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೇಳಿದ್ದರು. ಈ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಬಿಜೆಪಿ, 'ಮಾನ್ಯ ಕುಮಾರಣ್ಣ ಅವರೇ, ಊಟಕ್ಕೆ ಗತಿಯಿಲ್ಲದ ಯುವಕರು ಸೈನ್ಯಕ್ಕೆ ಸೇರುತ್ತಾರೆ ಎಂದು ಹೇಳಿರುವ ನಿಮಗೆ ನಾಚಿಕೆಯಾಗಬೇಕು. ಯುವಕರು ದೇಶಭಕ್ತಿಯಿಂದ ಸೈನ್ಯಕ್ಕೆ ಸೇರುತ್ತಾರೆಯೇ ಹೊರತು ಯಾವುದೇ ಆಸೆ, ಆಮಿಷಗಳಿಂದಲ್ಲ. ಸೈನಿಕರ ಬಗ್ಗೆ ಕೀಳಾಗಿ ಮಾತನಾಡಿದ ನಿಮ್ಮನ್ನು ನಾಡಿನ ಜನತೆ ಕ್ಷಮಿಸಲಾರರು' ಎಂದು ಬಿಜೆಪಿ ಕರ್ನಾಟಕ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿರುಗೇಟು ನೀಡಿದೆ.
ಅಲ್ಲದೆ, 'ಸೈನ್ಯಕ್ಕೆ ಸೇರುವವರು ಬಡಕುಟುಂಬದ ಯುವಕರೇ ಹೊರತು ಶ್ರೀಮಂತರ ಮನೆ ಮಕ್ಕಳಲ್ಲ ಎನ್ನುವ ನೀವು, ತಮ್ಮ ಮಗನಿಗೆ ಲೋಕಸಭಾ ಚುನಾವಣಾ ಟಿಕೆಟ್ ಕೊಡಿಸುವಲ್ಲಿ ತೋರಿಸಿದ ಉತ್ಸಾಹವನ್ನು, ದೇಶ ಕಾಯಲು ಆತನನ್ನು ಸೈನ್ಯಕ್ಕೆ ಕಳುಹಿಸುವಲ್ಲಿ ಯಾಕೆ ತೋರಿಸಲಿಲ್ಲ?' ಎಂದೂ ಟೀಕೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?