ರಾಜಕೀಯ

ಮೋದಿ ಹೆಲಿಕಾಪ್ಟರ್ ಪರಿಶೀಲನೆ: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಅಮಾನತು ಖಂಡನಾರ್ಹ- ಸಿದ್ದರಾಮಯ್ಯ

Nagaraja AB

ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಪರಿಶೀಲಿಸಿದ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರನ್ನು ಸೇವೆಯಿಂದ ಅಮಾನತು ಮಾಡಿರುವುದನ್ನು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಸ್ವಯಂ ಘೋಷಿತ ಚೌಕಿದಾರ್  ಹೆಲಿಕಾಪ್ಟರ್  ಪರಿಶೀಲಿಸಿದ ಕಾರಣ ಎದೆಗಾರಿಕೆಯ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರನ್ನು ಸೇವೆಯಿಂದ ಅಮಾನತು ಮಾಡಿರುವುದು ಖಂಡನಾರ್ಹವಾಗಿದೆ  ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Mr. #ElectionChowkidar ಮರೆ ಮಾಡಲು ಏನೂ ಇಲ್ಲದಿದ್ದಾಗ ಅಂತಹ ಅಭದ್ರತೆ ಏಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
SCROLL FOR NEXT