ಉಮೇಶ್ ಕತ್ತಿ 
ರಾಜಕೀಯ

ನಾನು ಕೂಡ ಮುಖ್ಯಮಂತ್ರಿಯಾಗಬೇಕು: ಶಾಸಕ ಉಮೇಶ್ ಕತ್ತಿ ಹೇಳಿದ್ದೇಕೆ?

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಿದ ಮೇಲೆ ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎಂದು ಯಡಿಯೂರಪ್ಪ ಆಪ್ತ ಹಾಗೂ 8 ಬಾರಿ ...

ಬೆಳಗಾವಿ:  ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಿದ ಮೇಲೆ  ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎಂದು ಯಡಿಯೂರಪ್ಪ ಆಪ್ತ ಹಾಗೂ 8 ಬಾರಿ ಶಾಸಕರಾಗಿರುವ ಉಮೇಶ್ ಕತ್ತಿ ಹೇಳಿದ್ದಾರೆ,
ಕೇಂದ್ರದಲ್ಲಿ ಬಿಜೆಪಿ ಹೊಸ ಸರ್ಕಾರ ರಚನೆ ಆಗುತ್ತಿದ್ದಂತೆ ರಾಜ್ಯದಲ್ಲೂ ಹೊಸ ಸರ್ಕಾರ ರಚನೆ ಆಗುತ್ತೆ. ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದು ಉಮೇಶ ಕತ್ತಿ ಹೇಳಿದ್ರು.
ಸದ್ಯ ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತಿಲ್ಲ, ಯಾಕಂದ್ರೆ 90 % ಬಜೆಟ್ ದಕ್ಷಿಣ ಕರ್ನಾಟಕಕ್ಕೆ ಹೋಗುತ್ತಿದ್ದೆ, 10 % ಮಾತ್ರ ಉತ್ತರ ಕರ್ನಾಟಕಕ್ಕೆ ಸಿಗುತ್ತೆ.  ಹೀಗಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ಆಗಬೇಕು ಎಂಬುವುದು ನಮ್ಮ ಇಚ್ಛೆ. ಯಾವುದೇ ಪಕ್ಷದಲ್ಲಿ ಇದ್ದರೂ ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು ಎಂಬುದು ನನ್ನ ಉದ್ದೇಶ. ಪ್ರತ್ಯೇಕ ರಾಜ್ಯ ವಿಚಾರದ ಬಗ್ಗೆ ಚರ್ಚೆ ಮಾಡಿ  ಮುಂದೆ ಹೇಳುತ್ತೇನೆ ಎಂದು ಅವರು ಹೇಳಿದರು.
ಉತ್ತರ ಕರ್ನಾಟಕದ ಬಗ್ಗೆ ಇರುವ ತಾರತಮ್ಯ ಧೋರಣೆಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಹೀಗಾಗಿ ನಾನು ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದೆ, ಮತದಾನ ಮಾಡಿದ ನಂತರ ಬೆಲ್ಲದ್ ಬಾಗೇವಾಡಿಯಲ್ಲಿ ಮಾತನಾಡಿದ ಉಮೇಶ್ ಕತ್ತಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸುಮಾರು 300-350 ಸೀಟುಗಳನ್ನು ಗೆಲ್ಲುವುದಾಗಿ ಹೇಳಿದ್ದಾರೆ,
ಇನ್ನೂ ಜಾರಕಿಹೊಳಿ ರಾಜಿನಾಮೆ ಸಂಬಂಧ ಪ್ರತಿಕ್ರಿಯಿಸಿದ ಉಮೇಶ್ ಕತ್ತಿ, ಅದು ಅವರ ಕುಟುಂಬಕ್ಕೆ ಸಂಬಂಧಿಸಿದ ವಿಷಯ, ಬಿಜೆಪಿಗೆ ಯಾರೇ ಬಂದರು ಅವರನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT