ಎಚ್ ವಿಶ್ವನಾಥ್ 
ರಾಜಕೀಯ

ಮೇ 23ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಒಂದು ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ನೀಡಿದ ಹೇಳಿಕೆ...

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಒಂದು ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ನೀಡಿದ ಹೇಳಿಕೆ ಇಂತಹದೊಂದು ಸಾಧ್ಯತೆಗೆ ಪುಷ್ಠಿ ನೀಡಿದೆ.
ಕಾಂಗ್ರೆಸ್ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಜೆಡಿಎಸ್ ಸೇರಿದರೆ ಸಚಿವ ಸ್ಥಾನ ನೀಡುವುದಾಗಿ ಆಹ್ವಾನ ನೀಡಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ನಗರದಲ್ಲಿ ಉತ್ತರಿಸಿದ ವಿಶ‍್ವನಾಥ್, ಮೈತ್ರಿ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ರಮೇಶ್ ಜಾರಕಿಹೊಳಿ ಅವರ ಮನೆಯಲ್ಲಿರುವ ಗೊಂದಲವನ್ನು ರಾಜ್ಯಕ್ಕೆ ಹಂಚುತ್ತಿದ್ದಾರೆ ಎಂದರು.
ಮೇ 23 ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಮುಖ್ಯಮಂತ್ರಿಗಳು ಜೆಡಿಎಸ್ ಸೇರುವಂತೆ ಆಹ್ವಾನ ನೀಡಿರುವ ಬಗ್ಗೆ ತಮಗೆ ಗೊತ್ತಿಲ್ಲ.  ಫಲಿತಾಂಶ ಬಂದ ಒಂದು ವಾರದ ಬಳಿಕ ಸಂಪುಟ ವಿಸ್ತರಣೆ ಆಗಬಹುದು. ಆ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಅವರ ವಿಚಾರವೂ ಚರ್ಚೆಯಾಗುವ ಸಾಧ್ಯತೆ ಇರಬಹುದು ಎಂದರು.
ಲೋಕಸಭೆ ಚುನಾವಣೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬರಲಾರಂಭಿಸಿದೆ. ಜೆಡಿಎಸ್‍ನಲ್ಲಿ 2 ಸಚಿವ ಸ್ಥಾನಗಳು ಖಾಲಿ ಇದ್ದು, ಸಂಪುಟ ವಿಸ್ತರಣೆ ಸುಮಾರು 7-8 ತಿಂಗಳಿನಿಂದ ನನೆಗುದಿಗೆ ಬಿದ್ದಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆ ಜಾರಿಯ ಕೆಲ ದಿನಗಳ ಮೊದಲುಷ್ಟೆ 8 ನಿಗಮ ಮಂಡಳಿಗಳಿಗೆ ಅಧ್ಯಕ್ಷಗಾದಿ ಹಂಚಿಕೆ ಮಾಡಲಾಗಿದ್ದು, ಜೆಡಿಎಸ್ ಕೋಟಾದಲ್ಲಿ ಇನ್ನೂ ಸ್ಥಾನಗಳು ಖಾಲಿ ಉಳಿದಿವೆ. 
ಭಾನುವಾರ ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಕುಮಾರಸ್ವಾಮಿ, ಚುನಾವಣಾ ಫಲಿತಾಂಶ ಬಂದ ನಂತರ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕ ಮಾಡುವುದಾಗಿ ಭರವಸೆ ನೀಡಿರುವುದು ಪಕ್ಷದ ಶಾಸಕರು ಮತ್ತು ಮುಖಂಡರಲ್ಲಿ ಮತ್ತೆ ಅಧಿಕಾರದ ಕನವರಿಕೆ ಚಿಗುರುವಂತೆ ಮಾಡಿದೆ.
ಮೇ 23ಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಅಧಿಕಾರ ಹಂಚಿಕೆಯಲ್ಲಿ ವಿಳಂಬ ಮಾಡುವುದಿಲ್ಲ. ಸಾಧ್ಯವಾದಷ್ಟು ಪಕ್ಷದ ಮುಖಂಡರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ಕಲ್ಪಿಸಲಾಗುವುದು. ಸೂಕ್ತರನ್ನು ಶಿಫಾರಸು ಮಾಡುವಂತೆ ಅವರು ಪಕ್ಷದ ಶಾಸಕರಿಗೆ ಹೇಳಿದ್ದಾರೆ. ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳ ನೇಮಕವನ್ನೂ ಮಾಡಿ ಪಕ್ಷ ಸಂಘಟಿಸುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

SCROLL FOR NEXT