ಬಿಎಸ್ ಯಡಿಯೂರಪ್ಪ 
ರಾಜಕೀಯ

ಮುಖ್ಯಮಂತ್ರಿ ಭೇಟಿ ಮಾಡಿದ ಬಿಎಸ್ಪಿ ಉಚ್ಛಾಟಿತ ಶಾಸಕ ಎನ್ ಮಹೇಶ್

ಬಿಎಸ್ ಪಿ ಉಚ್ಚಾಟಿತ ಶಾಸಕ ಎನ್ ಮಹೇಶ್ ಅವರು ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ವಿಧಾನ ಸೌಧದ ಕಚೇರಿಯಲ್ಲಿ...

ಬೆಂಗಳೂರು: ಬಿಎಸ್ ಪಿ ಉಚ್ಚಾಟಿತ ಶಾಸಕ ಎನ್  ಮಹೇಶ್ ಅವರು ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ವಿಧಾನ ಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದು, ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳಿಗೆ ಪುಷ್ಠಿ ನೀಡಿದೆ.
ಇಂದು ಯಡಿಯೂರಪ್ಪ ಅವರು ಸಭೆ ನಡೆಸುತ್ತಿದ್ದ ಸಮಿತಿ ಕೊಠಡಿ ಬಳಿ ಆಗಮಿಸಿದ ಮಹೇಶ್ ಅವರನ್ನುಕೊಠಡಿ ಪ್ರವೇಶಿಸಲು ಅಧಿಕಾರಿಗಳು ನಿರಾಕರಿಸಿದರು. ಬಳಿಕ ಶಾಸಕರಾದ ರಾಜುಗೌಡ, ಗೋವಿಂದ ಕಾರಜೋಳ, ಉದಾಸಿ ಅವರ ಜೊತೆ ಮುಖ್ಯಮಂತ್ರಿ ಕಚೇರಿಗೆ ತೆರಳಿ ಭೇಟಿ ಮಾಡಿದರು.
ಯಡಿಯೂರಪ್ಪ ಅವರೊಂದಿಗೆ ಎನ್ ಮಹೇಶ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.  ಭೇಟಿ ಬಳಿಕ  ಮಹೇಶ್ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಅಲ್ಲಿಂದ  ತೆರಳಿದರು.
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ವೇಳೆ ಸದನಕ್ಕೆ ಗೈರಾಗುವ ಮೂಲಕ ಮೈತ್ರಿ ಪಕ್ಷಕ್ಕೆ  ಮಹೇಶ್ ಆಘಾತ ನೀಡಿದ್ದರು. ಬಳಿಕ ಬಿಎಸ್ಪಿ ವರಿಷ್ಠೆ ಮಾಯಾವತಿ ಪಕ್ಷದಿಂದ ಅವರನ್ನು ಉಚ್ಛಾಟನೆ ಮಾಡಿದ್ದರು. 
ಮರು ದಿನ ಪತ್ರಿಕಾಗೋಷ್ಠಿ ನಡೆಸಿದ ಎನ್ ಮಹೇಶ್ ಮಾಹಿತಿಯ ಕೊರತೆಯಿಂದ ತಾವು ಸದನಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ನಾನು  ಪಕ್ಷದ ನಾಯಕರ ಸೂಚನೆ ಮೇರೆಗೆ ತಟಸ್ಥನಾಗಿದ್ದೆ ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದರು.
ಪಕ್ಷದಿಂದ ಉಚ್ಛಾಟನೆ ಬಗ್ಗೆ ಪಕ್ಷದ ವರಿಷ್ಠರಾದ ಮಾಯಾವತಿ ಅವರನ್ನು ಭೇಟಿ ಮಾಡಿ ಮನವೊಲಿಸುತ್ತೇನೆ ಎಂದು ಹೇಳಿದ್ದರು. ಕೆಲವೇ ದಿನಗಳಲ್ಲಿ ಇದೆಲ್ಲವೂ ಸರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಬಿಜೆಪಿ ಸೇರುವ ಬಗ್ಗೆ ಸುಳ್ಳು ಎಂದು ಹೇಳಿದ್ದರು. ನಂತರದ ಬೆಳವಣಿಗೆಯಲ್ಲಿ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ಳುವ ಮೂಲಕ ಹಾಗೂ ಮುಖ್ಯಮಂತ್ರಿ ಅವರನ್ನು ಬಿಜೆಪಿ ಶಾಸಕರ ಜೊತೆ ಭೇಟಿ ಮಾಡುವ ಮೂಲಕ ಬಿಜೆಪಿ ಸೇರ್ಪಡೆ ಬಗ್ಗೆ ಸುಳಿವು ನೀಡಿದ್ದಾರೆ.
ಅಲ್ಲದೆ ವಿಶ್ವಾಸ ಮತ ಯಾಚನೆ ವೇಳೆ ಗೈರಾದರೆ ಸಚಿವ ಸ್ಥಾನ ಹಾಗೂ ಹಣ ನೀಡುವುದಾಗಿ ಬಿಜೆಪಿ ನಾಯಕರಿಂದ ಮಹೇಶ್ ಗೆ ಆಹ್ವಾನ ನೀಡಲಾಗಿತ್ತು ಎಂಬ ಮಾತುಗಳು ಕೇಳಿ ಬಂದಿದ್ದವು. ಈಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ತೀವ್ರ  ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT