ಎಚ್.ವಿಶ್ವನಾಥ್ 
ರಾಜಕೀಯ

ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ: ಎಚ್.ವಿಶ್ವನಾಥ್ ರಾಜಕೀಯ ನಿವೃತ್ತಿ

ಹುಣಸೂರು ವಿಧಾನಸಭೆ ಕ್ಷೇತ್ರದಿಂದ ಉಪ ಚುನಾವಣೆಗೆ ಸ್ಪರ್ದಿಸುತ್ತಿಲ್ಲ, ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ತಾವು ಸಕ್ರಿಯ ರಾಜಕೀಯದಿಂದ ...

ಮೈಸೂರು: ಹುಣಸೂರು ವಿಧಾನಸಭೆ ಕ್ಷೇತ್ರದಿಂದ ಉಪ ಚುನಾವಣೆಗೆ ಸ್ಪರ್ದಿಸುತ್ತಿಲ್ಲ, ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ತಾವು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಜೆಡಿಎಸ್ ಉಚ್ಛಾಟಿತ, ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್‍ನಿಂದ ಉಚ್ಛಾಟನೆ ಮಾಡಿದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪ್ರಪಂಚ ವಿಶಾಲವಾಗಿದೆ. ಅತೃಪ್ತ ಶಾಸಕರೇ ಸೇರಿ ಒಂದು ಪಕ್ಷವನ್ನು ಕಟ್ಟಿದರೆ ಆಗುತ್ತೆ ಬಿಡಿ. ಹೊಸ ಪಕ್ಷ ಕಟ್ಟಬೇಕಿದೆ. ನಾನು ಚುನಾವಣೆಯಿಂದ ದೂರ ಉಳಿಯಲು ನಿರ್ಧಸಿದ್ದೇನೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ವಿಶ್ವನಾಥ್ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡರಲಿಲ್ಲ, ಜೊತೆಗೆ ಸಾ.ರಾ ಮಹೇಶ್ ಗೆ ಹೆಚ್ಚಿ ಆದ್ಯತೆ ನೀಡುತ್ತಿದ್ದದ್ದು, ವಿಶ್ವನಾಥ್ ಅವರಿಗೆ ಬೇಸರ ಮೂಡಿಸಿತ್ತು,  ಇದರಿಂದ ಬೇಸತ್ತಿದ್ದ ವಿಶ್ವನಾಥ್ ರಾಜಿನಾಮೆ ನೀಡಿ ಕಾಂಗ್ರೆಸ್ ಶಾಸಕರೊಂದಿಗೆ ಸೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT