ರಾಜಕೀಯ

ರಣಭೀಕರ ಪ್ರವಾಹಕ್ಕೆ ಕರ್ನಾಟಕ ತತ್ತರ: ಕಬಡ್ಡಿ ಆಡಿದ ಬಿಜೆಪಿ ಶಾಸಕ ಶ್ರೀರಾಮುಲು, ಆಕ್ರೋಶ!

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಬ್ಬಂಟಿಯಾಗಿ ಪ್ರವಾಹಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರೆ ಅತ್ತ ಬಿಜೆಪಿ ಶಾಸಕ ಶ್ರೀರಾಮುಲು ಅವರು ಕಬಡ್ಡಿ ಆಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಳ್ಳಾರಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಬ್ಬಂಟಿಯಾಗಿ ಪ್ರವಾಹಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರೆ ಅತ್ತ ಬಿಜೆಪಿ ಶಾಸಕ ಶ್ರೀರಾಮುಲು ಅವರು ಕಬಡ್ಡಿ ಆಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಬಳ್ಳಾರಿಯ ಗಾಂಧಿ ಭವನದಲ್ಲಿ ಶನಿವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಅವರು ಕಬಡ್ಡಿ ಆಡುವುದರಲ್ಲಿ ನಿರತರಾಗಿದ್ದರು. ಇದು ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. 

ರಾಜ್ಯ ಸಂಕಷ್ಟದಲ್ಲಿ ಸಿಲುಕಿರುವಾಗ ಶಾಸಕರಿಗೆ ಅದರ ಅರಿವೇ ಇಲ್ಲದಂತಾಗಿದೆ. ರಾಜ್ಯವೇ ಕಂಬನಿ ಮಿಡಿಯುತ್ತಿದ್ದರೂ ಕೆಲ ಶಾಸಕರು ಮಾತ್ರ ಪರಿಹಾರ ಕಾರ್ಯದಲ್ಲಿ ಭಾಗಿಯಾಗುತ್ತಿಲ್ಲ ಎಂಬ ಟೀಕೆ ವ್ಯಕ್ತವಾಗುತ್ತಿದೆ. 

ಈ ಬಗ್ಗೆ ಮಾತನಾಡಿದ ಶ್ರೀರಾಮುಲು ಅವರು ನಾಳೆಯಿಂದ ನೆರೆ ಪ್ರವಾಸಕ್ಕೆ ಹೊರಡುತ್ತೇನೆ. ನಾನು ಕಬಡ್ಡಿ ಆಡಿರುವುದು ಬೇರೆ ಉದ್ದೇಶದಿಂದಲ್ಲ, ಮಕ್ಕಳು ಹಠ ಮಾಡಿದ್ದರಿಂದ ಕಬಡ್ಡಿ ಆಡಿದೆ. ಇದು ಪೂರ್ವನಿಯೋಜಿತ ಕಾರ್ಯಕ್ರಮವಾಗಿತ್ತು. ಹೀಗಾಗಿ ಭಾಗವಹಿಸಿದ್ದೆ ಎಂದು ಸ್ಪಷ್ಟಪಡಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಪಿಯೂಷ್ ಗೋಯಲ್ ಅವರೇ, ಸುಳ್ಳು ಹೇಳಬೇಡಿ, ಈ ಒಪ್ಪಂದ ಸರೆಂಡರ್ ಅಷ್ಟೆ’: ರಾಹುಲ್–ವಾಣಿಜ್ಯ ಸಚಿವರ ನಡುವೆ ವಾಗ್ವಾದ-Video

ಈಶಾನ್ಯ ಭಾರತದ ಮೊಟ್ಟಮೊದಲ ವಿಮಾನ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ ಭೂಸ್ಪರ್ಶ: ಪ್ರಧಾನಿ ಮೋದಿ ಭೇಟಿ, ವಾಯುಪ್ರದರ್ಶನ ವೀಕ್ಷಣೆ-Video

'ನಿಮ್ಮಿಂದ ಆಗದಿದ್ದರೆ ಎದ್ದು ಹೊರ ಹೋಗಿ': ಆದೇಶ ನಿರಾಕರಿಸಿದ SP ಮೇಲೆ ಹೌಹಾರಿದ ಸಚಿವ, ಸಾರ್ವಜನಿಕ ಸಭೆಯಲ್ಲೇ ಹೈಡ್ರಾಮಾ..! Video

T20 World Cup 2026: ಅಫ್ಘಾನಿಸ್ತಾನ ತಂಡದ ಪ್ರದರ್ಶನ ವಿಶ್ಲೇಷಕ ಕೆಸಿ ರಾಮ ಸುಬ್ರಮಣಿಯನ್‌ಗೆ ಹೃದಯಾಘಾತ!

ಡಿಜಿಟಲ್ ಗೀಳು ಭವಿಷ್ಯ ಹಾಳು (ಕುಶಲವೇ ಕ್ಷೇಮವೇ)

SCROLL FOR NEXT