ಬಿಎಸ್ ಯಡಿಯೂರಪ್ಪ 
ರಾಜಕೀಯ

10 ಕೋಟಿ ಕೊಟ್ಟವರ ಹೆಸರು ಗ್ರಾಮಕ್ಕೆ: ಕರ್ನಾಟಕವನ್ನು ಮಾರಾಟಕ್ಕಿಡಬೇಡಿ ಎಂದ ಜೆಡಿಎಸ್

ಪ್ರವಾಹ ಪೀಡಿತ ಗ್ರಾಮಗಳ ಪುನಶ್ಚೇತನಕ್ಕಾಗಿ 10 ಕೋಟಿಗಿಂತ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನೇ ಆ ಗ್ರಾಮಗಳಿಗೆ ನಾಮಕರಣ ಮಾಡುವ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ನಿರ್ಧಾರಕ್ಕೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಬೆಂಗಳೂರು: ಪ್ರವಾಹ ಪೀಡಿತ ಗ್ರಾಮಗಳ ಪುನಶ್ಚೇತನಕ್ಕಾಗಿ 10 ಕೋಟಿಗಿಂತ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನೇ ಆ ಗ್ರಾಮಗಳಿಗೆ ನಾಮಕರಣ ಮಾಡುವ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ನಿರ್ಧಾರಕ್ಕೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಯಡಿಯೂರಪ್ಪ ಅವರ ಪ್ರಸ್ತಾವವನ್ನು ತೀವ್ರವಾಗಿ ಖಂಡಿಸಿರುವ ಜೆಡಿಎಸ್​ ಇದೊಂದು ತುಘಲಕ್​ ನಿರ್ಧಾರವಾಗಿದ್ದು, ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ ಎಂದು ಒತ್ತಾಯಿಸಿದೆ.

ಬುಧವಾರ ವಿಧಾನಸೌಧದಲ್ಲಿ ನಡೆದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಮಾತನಾಡಿದ್ದ ಸಿಎಂ ಯಡಿಯೂರಪ್ಪ, ಪ್ರವಾಹದಿಂದಾಗಿ ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ. ಅವರ ನೆರವಿಗೆ ಉದ್ಯಮಿಗಳು ಮುಂದಾಗಬೇಕು. ಗ್ರಾಮಗಳ ಪುನಶ್ಚೇತನಕ್ಕೆ 10 ಕೋಟಿಗಿಂತ ಅಧಿಕ ದೇಣಿಗೆ ನೀಡಿದರೆ ಅವರ ಕಂಪನಿಯ ಹೆಸರನ್ನು ಆ ಗ್ರಾಮಗಳಿಗೆ ನಾಮಕರಣ ಮಾಡುವುದಾಗಿ ಹೇಳಿದ್ದರು. 

ಈ ಹಿನ್ನೆಲೆಯಲ್ಲಿ ಇಂದು ಟ್ವೀಟ್ ಮಾಡಿರುವ ಜೆಡಿಎಸ್, ಸಿಎಂ ನಿರ್ಧಾರ ತುಘಲಕ್​ ನಿರ್ಧಾರದಂತಿದೆ. ನಮ್ಮ ರಾಜ್ಯದ ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆಯಿದೆ. ನೆರೆಯಿಂದ ಎಲ್ಲವನ್ನೂ ಕಳೆದುಕೊಂಡಿರುವರಿಗೆ ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳುವಂತೆ ಮಾಡಬೇಡಿ. ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT