ಬಿಎಸ್ ಯಡಿಯೂರಪ್ಪ 
ರಾಜಕೀಯ

10 ಕೋಟಿ ಕೊಟ್ಟವರ ಹೆಸರು ಗ್ರಾಮಕ್ಕೆ: ಕರ್ನಾಟಕವನ್ನು ಮಾರಾಟಕ್ಕಿಡಬೇಡಿ ಎಂದ ಜೆಡಿಎಸ್

ಪ್ರವಾಹ ಪೀಡಿತ ಗ್ರಾಮಗಳ ಪುನಶ್ಚೇತನಕ್ಕಾಗಿ 10 ಕೋಟಿಗಿಂತ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನೇ ಆ ಗ್ರಾಮಗಳಿಗೆ ನಾಮಕರಣ ಮಾಡುವ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ನಿರ್ಧಾರಕ್ಕೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಬೆಂಗಳೂರು: ಪ್ರವಾಹ ಪೀಡಿತ ಗ್ರಾಮಗಳ ಪುನಶ್ಚೇತನಕ್ಕಾಗಿ 10 ಕೋಟಿಗಿಂತ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನೇ ಆ ಗ್ರಾಮಗಳಿಗೆ ನಾಮಕರಣ ಮಾಡುವ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ನಿರ್ಧಾರಕ್ಕೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಯಡಿಯೂರಪ್ಪ ಅವರ ಪ್ರಸ್ತಾವವನ್ನು ತೀವ್ರವಾಗಿ ಖಂಡಿಸಿರುವ ಜೆಡಿಎಸ್​ ಇದೊಂದು ತುಘಲಕ್​ ನಿರ್ಧಾರವಾಗಿದ್ದು, ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ ಎಂದು ಒತ್ತಾಯಿಸಿದೆ.

ಬುಧವಾರ ವಿಧಾನಸೌಧದಲ್ಲಿ ನಡೆದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಮಾತನಾಡಿದ್ದ ಸಿಎಂ ಯಡಿಯೂರಪ್ಪ, ಪ್ರವಾಹದಿಂದಾಗಿ ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ. ಅವರ ನೆರವಿಗೆ ಉದ್ಯಮಿಗಳು ಮುಂದಾಗಬೇಕು. ಗ್ರಾಮಗಳ ಪುನಶ್ಚೇತನಕ್ಕೆ 10 ಕೋಟಿಗಿಂತ ಅಧಿಕ ದೇಣಿಗೆ ನೀಡಿದರೆ ಅವರ ಕಂಪನಿಯ ಹೆಸರನ್ನು ಆ ಗ್ರಾಮಗಳಿಗೆ ನಾಮಕರಣ ಮಾಡುವುದಾಗಿ ಹೇಳಿದ್ದರು. 

ಈ ಹಿನ್ನೆಲೆಯಲ್ಲಿ ಇಂದು ಟ್ವೀಟ್ ಮಾಡಿರುವ ಜೆಡಿಎಸ್, ಸಿಎಂ ನಿರ್ಧಾರ ತುಘಲಕ್​ ನಿರ್ಧಾರದಂತಿದೆ. ನಮ್ಮ ರಾಜ್ಯದ ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆಯಿದೆ. ನೆರೆಯಿಂದ ಎಲ್ಲವನ್ನೂ ಕಳೆದುಕೊಂಡಿರುವರಿಗೆ ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳುವಂತೆ ಮಾಡಬೇಡಿ. ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT