ಡಿಕೆ ಶಿವಕುಮಾರ್ ಮತ್ತು ಎಂಬಿ ಪಾಟೀಲ್ 
ರಾಜಕೀಯ

ಫೋನ್ ಟ್ಯಾಪಿಂಗ್ ಕೆಸರೆರಚಾಟ:  ಡಿಕೆ ಶಿವಕುಮಾರ್-ಎಂಬಿ ಪಾಟೀಲ್ ಜಟಾಪಟಿ

; ಕಾಂಗ್ರೆಸ್‌ ಪಕ್ಷದ ಪ್ರಭಾವಿ ನಾಯಕರಾದ ಡಿ.ಕೆ. ಶಿವಕುಮಾರ್‌ ಹಾಗೂ ಎಂ.ಬಿ. ಪಾಟೀಲ್‌ ಅವರ ನಡುವೆ ಇದೀಗ ಬಹಿರಂಗವಾಗಿ ಮಾತಿನ ಚಕಮಕಿ ನಡೆಯುತ್ತಿರುವುದರ ಹಿಂದೆ ಭವಿಷ್ಯದಲ್ಲಿ ಪಕ್ಷದ ಚುಕ್ಕಾಣಿ ಹಿಡಿಯಲು ಈ ಇಬ್ಬರು ನಾಯಕರ ...

ಬೆಂಗಳೂರು; ಕಾಂಗ್ರೆಸ್‌ ಪಕ್ಷದ ಪ್ರಭಾವಿ ನಾಯಕರಾದ ಡಿ.ಕೆ. ಶಿವಕುಮಾರ್‌ ಹಾಗೂ ಎಂ.ಬಿ. ಪಾಟೀಲ್‌ ಅವರ ನಡುವೆ ಇದೀಗ ಬಹಿರಂಗವಾಗಿ ಮಾತಿನ ಚಕಮಕಿ ನಡೆಯುತ್ತಿರುವುದರ ಹಿಂದೆ ಭವಿಷ್ಯದಲ್ಲಿ ಪಕ್ಷದ ಚುಕ್ಕಾಣಿ ಹಿಡಿಯಲು ಈ ಇಬ್ಬರು ನಾಯಕರ ನಡುವೆ ಇರುವ ಪೈಪೋಟಿಯೇ ಕಾರಣ ಎನ್ನಲಾಗುತ್ತಿದೆ.

ನನಗೆ ಮತ್ತು ನನ್ನ ಬಗ್ಗೆ ಯಾವುದೇ ಪೋನ್ ಕದ್ದಾಲಿಕೆ ವಿಚಾರ ಬಂದಿದಿಲ್ಲ. ಕೆಲ ಅಧಿಕಾರಿಗಳು ಅಂತದ್ದೇನಿಲ್ಲ ಎಂದರೆ ಕೆಲವರು ಸಣ್ಣ ಸಂಶಯವಿದೆ ಎಂದಿದ್ದರು. ಮೂರು ತಿಂಗಳಲ್ಲಿ ಈ  ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಎಂಬಿ ಪಾಟೀಲ್ ಒತ್ತಾಯಿಸಿದ್ದಾರೆ. ಜತೆಗೆ ಡಿಕೆ ಶಿವಕುಮಾರ್ ಅವರಿಗೂ ತಿರುಗೇಟು ನೀಡಿದ್ದಾರೆ. ಡಿಕೆ ಶಿವಕುಮಾರ್  ಅದು ಯಾವ ಕಾರಣಕ್ಕೆ ದೇವೇಗೌಡರ ಕುಟುಂಬದ ಪರ ಒಲವು ತೋರಿಸುತ್ತಿದದಾರೋ ಗೊತ್ತಿಲ್ಲ. ಜಾತಿ ಆಧಾರದಲ್ಲಿ ರಾಜಕಾರಣ ಮಾಡಿ ಡಿಕೆಶಿ ಓಲೈಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಎಂಬಿ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿರುವ ಶಿವಕುಮಾರ್, ಮಾಜಿ ಗೃಹ ಸಚಿವರಿಗೆ ರಾಜಕಾರಣ ಮಾಡಬೇಕಿದೆ. ಹೀಗಾಗಿ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ, ಯಾರ ದೂರವಾಣಿಗಳು ಕದ್ದಾಲಿಕೆಯಾಗಿಲ್ಲ ಎಂದು ಶಿವಕುಮಾರ್ ಟಾಂಗ್ ನೀಡಿದ್ದಾರೆ. 

ಪ್ರಭಾವಿ ಸಮುದಾಯಗಳಿಗೆ ಸೇರಿದ ಈ ಇಬ್ಬರು ನಾಯಕರ ಹೆಸರು ಈ ಹಿಂದೆಯೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿತ್ತು. ಕುತೂಹಲಕಾರಿ ಸಂಗತಿಯೆಂದರೆ, ತಾನಾಗೆ ಬಂದಿದ್ದ ಈ ಅವಕಾಶವನ್ನು ಈ ಇಬ್ಬರೂ ನಾಯಕರು ಕಾಲ ಪಕ್ವವಾಗಿಲ್ಲ ಎಂಬ ಕಾರಣಕ್ಕೆ ನಿರಾಕರಿಸಿದ್ದರು. ಇದರ ಬದಲಾಗಿ ಸಚಿವ ಸ್ಥಾನವನ್ನೇ ಬಯಸಿದ್ದರು. ಆದರೆ, ಇದೀಗ ಪಕ್ಷ ಅಧಿಕಾರ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಹತ್ವ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT